ಬೆಂಗಳೂರು: ಭಾರತದ ಭೂಪಟದ ರೀತಿಯಲ್ಲಿರುವ ಹಿರಿಯೂರಿನ ವಾಣಿವಿಲಾಸ ಸಾಗರದಲ್ಲಿ ಬರುವ ನವೆಂಬರ್ ನಿಂದ ಬೋಟಿಂಗ್ ಆರಂಭಿಸಲಾಗುವುದು ಎಂದು ಪ್ರವಾಸೋದ್ಯಮ ಖಾತೆ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ವಾಣಿವಿಲಾಸ ಸಾಗರದಲ್ಲಿ ಕಯಾಕಿಂಗ್, ಜೆಟ್ ಸ್ಕೀ, ಬನಾನ ರೈಡ್ ಮುಂತಾದ ಚಟುವಟಿಕೆಗಳನ್ನು ನಡೆಸಲು ಜಲಸಂಪನ್ಮೂಲ ಇಲಾಖೆಯಿಂದ ನಿರಪೇಕ್ಷಣಾ ಪತ್ರದ ನಿರೀಕ್ಷೆಯಲ್ಲಿದ್ದೇವೆ ಎಂದು ಮಾಹಿತಿ ನೀಡಿದರು.
ಈ ಮೂಲಕ ಚಿತ್ರದುರ್ಗದ ಮಾರಿ ಕಣಿವೆ ಎಂದು ಕರೆಯಲಾಗುವ ವಾಣಿ ವಿಲಾಸ ಜಲಾಶಯದಲ್ಲಿ ಬೋಟಿಂಗ್ ವ್ಯವಸ್ಥೆ ಶೀಘ್ರದಲ್ಲೇ ಜಾರಿಗೆ ತರುವ ಸೂಚನೆ ಸಿಕ್ಕಿದೆ. ಜೊತೆಗೆ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಚಾಲನೆ ಸಿಕ್ಕಂತಾಗಿದೆ.




