ಬೆಂಗಳೂರು: ಅತ್ಯಾಚಾರ ಆರೋಪಿ ಭಾರತಕ್ಕೆ ಮರಳುವ ಸೂಚನೆ ಸಿಗುತ್ತಿದ್ದಂತೆಯೇ ಬ್ರದರ್ ಸ್ವಾಮಿಗಳು ಫ್ಯಾಮಿಲಿ ಸಮೇತ ಟ್ರಿಪ್ ಹೋಗಿದ್ದಾರೆ ಎಂದು ಕೆಪಿಸಿಸಿ ಹೇಳಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆ ನಂತರ ನಾಪತ್ತೆಯಾಗಿದ್ದ ಪ್ರಜ್ವಲ್ ರೇವಣ್ಣ ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಈ ನಡುವೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದಿರುವ ಕೆಪಿಸಿಸಿ, ಈ ಸಂದರ್ಭದಲ್ಲಿ ಜಾಲಿ ಟ್ರಿಪ್ ಗೆ ಹೋಗಿದ್ದು ಪ್ರಕರಣದ ಕುರಿತು ಎದುರಾಗುವ ಪ್ರಶ್ನೆಗಳಿಗೆ ಉತ್ತರಿಸಲಾಗದ ಹೇಡಿತನವೊ ಅಥವಾ ರೇವಣ್ಣ ಕುಟುಂಬಕ್ಕೂ ನನಗೂ ಸಂಬಂಧವಿಲ್ಲ ಎಂದು ಸಂದೇಶ ನೀಡುವುದಕ್ಕೋ? ಎಂದು ಪ್ರಶ್ನಿಸಿದೆ.

ಪ್ರಜ್ವಲ್ ಪ್ರಕರಣದಲ್ಲಿ ಬ್ರದರ್ ಸ್ವಾಮಿಗಳು ಇದುವರೆಗೂ ಒಮ್ಮೆಯೂ ಹೊಣೆಗಾರಿಕೆಯಿಂದ ವರ್ತಿಸಿದ ಉದಾಹರಣೆ ಇಲ್ಲ. ತಮ್ಮದೇ ಪಕ್ಷದ, ತಮ್ಮದೇ ಕುಟುಂಬದ ವ್ಯಕ್ತಿಯೊಬ್ಬನಿಂದ ಇಡೀ ರಾಜ್ಯವೇ ತಲೆತಗ್ಗಿಸುವ ಕೆಲಸ ನಡೆದಿದ್ದರೂ ಬ್ರದರ್ ಸ್ವಾಮಿಗಳಿಗೆ ಕಿಂಚಿತ್ ಪಶ್ಚಾತ್ತಾಪವಿಲ್ಲದೆ ಜಾಲಿ ಟ್ರಿಪ್ ಹೊಡೆಯುತ್ತಿರುವುದು ನಾಚಿಕೆಗೇಡು ಎಂದಿದೆ.




