ಬೆಂಗಳೂರು: ಅಚ್ಚರಿಯ ಮತ್ತು ದಿಡೀರ್ ರಾಜಕೀಯ ವಿದ್ಯಮಾನವೊಂದಲ್ಲಿ ಸಿಎಂ ರಾಜಕೀಯ ಸಲಹೆಗಾರರ ಹುದ್ದೆಗೆ ಆಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಬಿ.ಆರ್.ಪಾಟೀಲ್ ಸಿಎಂ ಸಿದ್ದರಾಮಯ್ಯನವರ ಹಳೆಯ ಸ್ನೇಹಿತ ಹಾಗೂ ಪರಮಾಪ್ತರಲ್ಲಿ ಒಬ್ಬರು. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅವರಿಗೆ ಪ್ರಿಯಾಂಕ್ ಖರ್ಗೆ ಹಾಗೂ ಶರಣಪ್ರಕಾಶ್ ಪಾಟೀಲ್ ಕಲಬುರಗಿ ಜಿಲ್ಲೆಯಿಂದ ಅಡ್ಡಲಾಗಿದ್ದರು. ಹೀಗಾಗಿ ಬಿ.ಆರ್.ಪಾಟೀಲ್ ಹಲವು ಬಾರಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡುವ ಮೂಲಕ ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದರು.
ಇವರನ್ನು ಸಮಾಧಾನ ಪಡಿಸಲು ಯತ್ನಿಸಿದ ಸಿದ್ದರಾಮಯ್ಯ, ಬಿ ಆರ್ ಪಾಟೀಲ್ ಅವರನ್ನು ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸ್ಥಾನಮಾನ ನೀಡಿದ್ದರು. ಆದರೆ ಬಿ.ಆರ್.ಪಾಟೀಲ್ ರಾಜ್ಯ ಹಾಗೂ ಜಿಲ್ಲಾ ರಾಜಕಾರಣದಿಂದ ಬೇಸತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.




