ಬೆಂಗಳೂರು: ಸಹಾಯ ಕೇಳಿ ಬಂದ ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸಿಐಡಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ತಮ್ಮ ವಕೀಲರ ಜೊತೆಗೆ ಸಿಐಡಿ ಕೇಂದ್ರ ಕಚೇರಿಗೆ ಆಗಮಿಸಿದ ಯಡಿಯೂರಪ್ಪ, ತನಿಖಾಧಿಕಾರಿ ಮುಂದೆ ಹಾಜರಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ದುರುದ್ದೇಶ ಪೂರ್ವಕವಾಗಿದೆ ಎಂದರು.
ತಮ್ಮ ಬಳಿ ಸಹಾಯಚಿಸಿ ಬಂದ ಮಹಿಳೆಗೆ ಧೈರ್ಯ ತುಂಬಿದ್ದೇನೆ. ಅಲ್ಲದೆ ಆಕೆಗೆ ನ್ಯಾಯ ತೊರಗಿಸಿಕೊಡುವ ಭರವಸೆ ನೀಡಿದ್ದೇನೆ. ಜೊತೆಗೆ ಹಣಕಾಸು ನೆರವನ್ನು ನೀಡಲಾಗಿದೆ. ಹೀಗಿದ್ದರೂ ತಮ್ಮ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಸಹಾಯ ಮಾಡಲು ಬರುವವರ ಮೇಲೆ ಪ್ರಕರಣ ದಾಖಲಿಸುವ ಕೆಟ್ಟ ಚಾಳಿಯನ್ನು ಆ ಮಹಿಳೆ ಹೊಂದಿದ್ದಾರೆ ಎಂದು ತನಿಖಾಧಿಕಾರಿಗೆ ತಿಳಿಸಿದ್ದಾರೆ.
ಉನ್ನತ ಸ್ಥಾನದಲ್ಲಿರುವ ತಮಗೆ ರಾಜಕೀಯವಾಗಿ ಹಿನ್ನಡೆ ತರಬೇಕು ಎಂಬ ಉದ್ದೇಶದಿಂದ ಈ ಪ್ರಕರಣವನ್ನು ದಾಖಲಿಸಲಾಗಿದೆ. ಇದೊಂದು ಸಂಪೂರ್ಣ ಸುಳ್ಳು ಮತ್ತು ಕಟ್ಟುಕಥೆ ಎಂದು ಹೇಳಿಕೆ ನೀಡಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ನಡೆದಿರುವ ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಹೀಗಾಗಿ ಸರ್ಕಾರ ಈ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದೆ. ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದರೂ ಅವರು ವಿಚಾರಣೆಗೆ ಬಂದಿರಲಿಲ್ಲ.
ಈ ಹಿನ್ನೆಲೆಯಲ್ಲಿ ಸಿಐಡಿ ತಂಡ ನ್ಯಾಯಾಲಯದ ಮೊರೆ ಹೊಕ್ಕಿತ್ತು. ಕೋರ್ಟ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ ಮಾಡಿತ್ತು. ಇದರಿಂದ ಅವರು ಬಂಧನದ ಭೀತಿಗೆ ಸಿಲುಕಿದ್ದರು.
ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿ ಯಡಿಯೂರಪ್ಪ ಹೈಕೋರ್ಟ್ ನಲ್ಲಿ ರಿಟ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುಂದಿನ ಆದೇಶದವರೆಗೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸೂಚನೆ ನೀಡಿತ್ತು. ನಂತರ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.




