ಬೆಂಗಳೂರು: ಸಹಾಯ ಕೇಳಿ ಬಂದ ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸಿಐಡಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ತಮ್ಮ ವಕೀಲರ ಜೊತೆಗೆ ಸಿಐಡಿ ಕೇಂದ್ರ ಕಚೇರಿಗೆ ಆಗಮಿಸಿದ ಯಡಿಯೂರಪ್ಪ, ತನಿಖಾಧಿಕಾರಿ ಮುಂದೆ ಹಾಜರಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ದುರುದ್ದೇಶ ಪೂರ್ವಕವಾಗಿದೆ ಎಂದರು.
ತಮ್ಮ ಬಳಿ ಸಹಾಯಚಿಸಿ ಬಂದ ಮಹಿಳೆಗೆ ಧೈರ್ಯ ತುಂಬಿದ್ದೇನೆ. ಅಲ್ಲದೆ ಆಕೆಗೆ ನ್ಯಾಯ ತೊರಗಿಸಿಕೊಡುವ ಭರವಸೆ ನೀಡಿದ್ದೇನೆ. ಜೊತೆಗೆ ಹಣಕಾಸು ನೆರವನ್ನು ನೀಡಲಾಗಿದೆ. ಹೀಗಿದ್ದರೂ ತಮ್ಮ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಸಹಾಯ ಮಾಡಲು ಬರುವವರ ಮೇಲೆ ಪ್ರಕರಣ ದಾಖಲಿಸುವ ಕೆಟ್ಟ ಚಾಳಿಯನ್ನು ಆ ಮಹಿಳೆ ಹೊಂದಿದ್ದಾರೆ ಎಂದು ತನಿಖಾಧಿಕಾರಿಗೆ ತಿಳಿಸಿದ್ದಾರೆ.
ಉನ್ನತ ಸ್ಥಾನದಲ್ಲಿರುವ ತಮಗೆ ರಾಜಕೀಯವಾಗಿ ಹಿನ್ನಡೆ ತರಬೇಕು ಎಂಬ ಉದ್ದೇಶದಿಂದ ಈ ಪ್ರಕರಣವನ್ನು ದಾಖಲಿಸಲಾಗಿದೆ. ಇದೊಂದು ಸಂಪೂರ್ಣ ಸುಳ್ಳು ಮತ್ತು ಕಟ್ಟುಕಥೆ ಎಂದು ಹೇಳಿಕೆ ನೀಡಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ನಡೆದಿರುವ ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಹೀಗಾಗಿ ಸರ್ಕಾರ ಈ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದೆ. ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದರೂ ಅವರು ವಿಚಾರಣೆಗೆ ಬಂದಿರಲಿಲ್ಲ.
ಈ ಹಿನ್ನೆಲೆಯಲ್ಲಿ ಸಿಐಡಿ ತಂಡ ನ್ಯಾಯಾಲಯದ ಮೊರೆ ಹೊಕ್ಕಿತ್ತು. ಕೋರ್ಟ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ ಮಾಡಿತ್ತು. ಇದರಿಂದ ಅವರು ಬಂಧನದ ಭೀತಿಗೆ ಸಿಲುಕಿದ್ದರು.
ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿ ಯಡಿಯೂರಪ್ಪ ಹೈಕೋರ್ಟ್ ನಲ್ಲಿ ರಿಟ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುಂದಿನ ಆದೇಶದವರೆಗೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸೂಚನೆ ನೀಡಿತ್ತು. ನಂತರ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.




