ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಹಾಲು ಮಾರಾಟ ದರ ಹೆಚ್ಚಳದ ಬೆನ್ನಲ್ಲೇ ಸಾರಿಗೆ ಸಂಸ್ಥೆ ಬಸ್ ಗಳ ಪ್ರಯಾಣ ದರವೂ ಹೆಚ್ಚಳವಾಗಲಿದೆ ಎಂಬ ಚರ್ಚೆ ನಡೆದಿದೆ. ಇಂತಹ ಚರ್ಚೆಯ ನಡುವೆ ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಯ ನಿವೃತ್ತ ನೌಕರರಿಗೆ ಬಂಪರ್ ಕೊಡುಗೆ ನೀಡಿದೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಈ ವಿಷಯವಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ವಿಶೇಷ ಆಸಕ್ತಿ ವಹಿಸಿ ಕ್ರಮ ಕೈಗೊಂಡ ಪರಿಣಾಮ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2023ರ ಮಾರ್ಚ್ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ.15ರಷ್ಟು ಹೆಚ್ಚುವರಿ ನಿವೃತ್ತಿ ವೇತನ ಇನ್ನು ಮುಂದೆ ಸಿಗಲಿದೆ. 2023ರ ಮಾರ್ಚ್ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019ರ ಡಿಸೆಂಬರ್ 31ರಂದು ಅವರು ಪಡೆಯುತ್ತಿದ್ದ ಮೂಲವೇತನ ಪರಿಗಣಿಸಿ ಶೇ.15ರಷ್ಟು ಹೆಚ್ಚಿಸಿ ವೇತನ ಶ್ರೇಣಿ ಪರಿಷ್ಕರಿಸಲು ಆದೇಶ ಹೊರಡಿಸಲಾಗಿದೆ
ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ನೀಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. 2023ರ ಮಾರ್ಚ್ 1ರಂದು ಸಂಸ್ಥೆಯ ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020ರ ಜನವರಿ 1 ರಿಂದ 2023ರ ಫೆಬ್ರವರಿ 28ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.



