ನಾಗಪುರ ಪರಿವರ್ತನಾ ದಿನ ಕಾರ್ಯಕ್ರಮಕ್ಕೆ ತೆರಳಲು ಬಸ್ ವ್ಯವಸ್ಥೆ

2 years ago

ಪರಿವರ್ತನಾ ದಿನ ಕಾರ್ಯಕ್ರಮಕ್ಕೆ ತೆರಳಲು ಆಯ್ಕೆಯಾದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಗೆ ಅ.10 ರಂದು ಬಸ್ ವ್ಯವಸ್ಥೆ

ಬಳ್ಳಾರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿಯಲ್ಲಿ ನಡೆಯಲಿರುವ ಪರಿವರ್ತನಾ ದಿನ(ವಿಜಯದಶಮಿ ದಿನದಂದು) ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಗೆ ಅ.10ರಂದು ಬೆಳಿಗ್ಗೆ 07 ಗಂಟೆಗೆ ದೀಕ್ಷಾ ಭೂಮಿ ಯಾತ್ರೆಗೆ ತೆರಳಲು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ.ಬಿ ತಿಳಿಸಿದ್ದಾರೆ.

ಆಯ್ಕೆಯಾದ ಅನುಯಾಯಿಗಳು ಬಳ್ಳಾರಿ (ಹಳೆ ಜಿಲ್ಲಾಧಿಕಾರಿಗಳ ಕಚೇರಿ), ಸಿರುಗುಪ್ಪ (ಹೈಸ್ಕೂಲ್ ಮೈದಾನ), ಸಂಡೂರು (ತಾಲ್ಲೂಕು ಪಂಚಾಯತ್ ಕಚೇರಿ) ಹಾಗೂ ಕಂಪ್ಲಿ (ತಹಶೀಲ್ದಾರ ಕಚೇರಿ) ತಾಲ್ಲೂಕುಗಳಿಂದ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಆಯ್ಕೆಯಾದ ಅರ್ಹ ಯಾತ್ರಾರ್ಥಿಗಳು ಅಂದು (ಅ.10 ರಂದು) ಬೆಳಿಗ್ಗೆ 07 ಗಂಟೆಗೆ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ನಿಗಧಿಪಡಿಸಿದ ಸ್ಥಳಕ್ಕೆ ಹಾಜರಿರಬೇಕು ಎಂದು ತಿಳಿಸಿದ್ದಾರೆ.

Leave a Reply