ಅಮಿತ್ ಷಾ ಅವರು ಮಾನಸಿಕ ಅಸ್ವಸ್ಥರಾದಂತೆ ಕಾಣುತ್ತಿದೆ. ಅವರ ಮಾತು ಮತ್ತು ವರ್ತನೆ ಸಂಪೂರ್ಣ ದುರಹಂಕಾರದಿಂದ ಕೂಡಿದ್ದು ಅವರಿಗೆ ಅಧಿಕಾರದ ನಶೆ ಏರಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮಿಸ್ಟರ್ ಅಮಿತ್ ಷಾ ಅವರೇ, ದೇವರ ನಾಮವನ್ನು ಜಪಿಸುವುದರಿಂದ ಯಾರಿಗೂ “7 ಜನ್ಮ”ದಲ್ಲಿ “ಸ್ವರ್ಗ” ಪ್ರಾಪ್ತಿಯಾಗುವುದಿಲ್ಲ ಎಂದು ನಮಗೆ ತಿಳಿದಿದೆ. ಆದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರು ತಳಸಮುದಾಯಗಳಿಗೆ ಚೈತನ್ಯ ನೀಡುತ್ತದೆ. ಅವರಿಗೆ ಸಾಮಾಜಿಕ, ಆರ್ಥಿಕ ಸಮಾನತೆಯ ಮೂಲಕ ‘ಘನತೆ’ಯ ಬದುಕನ್ನು ನೀಡುತ್ತದೆ. ಅದು ಈ ‘ಜನ್ಮ’ದಲ್ಲಿಯೇ’.
ಬಹು ಮುಖ್ಯವಾಗಿ ಬಾಬಾಸಾಹೇಬರ ನಾಮವನ್ನು ಜಪಿಸುವುದರಿಂದ ನಮಗೆ ಮನುಸ್ಮೃತಿಯಿಂದ ‘ಮುಕ್ತಿ’ ದೊರಕುತ್ತದೆ.
ಬಾಬಾಸಾಹೇಬರ ಕಾರ್ಯಗಳು ಮತ್ತು ಆದರ್ಶಗಳು ಇಂದು ಹೆಚ್ಚು ಪ್ರಸ್ತುತವಾಗುತ್ತಿರುವುದು ಆರೆಸ್ಸೆಸ್ ಸಿದ್ದಾಂತಕ್ಕೆ ಮುಳುವಾಗಿದೆ. ಇದು ಮೋದಿ ಮತ್ತವರ ಸಹೋದ್ಯೋಗಿಗಳಿಗೆ ನುಂಗಲಾರದ ತುತ್ತಾಗಿದೆ.
ಸಂಸತ್ತಿನಲ್ಲಿ ಅಥವಾ ಯಾವುದೇ ವೇದಿಕೆಯಲ್ಲಿ ಮಾತನಾಡುವಾಗ ಪ್ರತಿ ಬಾರಿಯೂ ಬಾಬಾಸಾಹೇಬರ ಹೆಸರನ್ನು ಉಲ್ಲೇಖಿಸಬೇಕು ಎಂಬುದು ಅಮಿತ್ ಷಾ ಅವರನ್ನು ಇನ್ನಿಲ್ಲದಂತೆ ಕಾಡುತ್ತಿರುವಂತಿದೆ.
ಬಿಜೆಪಿಯು ಸಂವಿಧಾನ ವಿರೋಧಿಯಾಗಿದೆ. ಏಕೆಂದರೆ ಸಂವಿಧಾನವು ಆರೆಸ್ಸೆಸ್ ಸಿದ್ದಾಂತಕ್ಕೆ ವಿರುದ್ಧವಾಗಿ ಎಲ್ಲರಿಗೂ ಸಮಾನತೆಯನ್ನು ಪ್ರತಿಪಾದಿಸುತ್ತದೆ ಮತ್ತು ಶೋಷಿತ ವರ್ಗಗಳಿಗೆ ಬದುಕಿನ ಘನತೆಯನ್ನು ನೀಡಿದೆ.
– ಪ್ರಿಯಾಂಖ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ




