ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಬೆಂಗಳೂರು ವತಿಯಿಂದ ಪುಸ್ತಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸದರಿ ಪ್ರಶಸ್ತಿಗೆ ಬಂಜಾರ ಸಮುದಾಯದ ಲೇಖಕರು ಸ್ವತಃ ತಾವೇ ಬರೆದಿರುವ ವಿವಿಧ ಪ್ರಕಾರದಲ್ಲಿ ವರ್ಷದಲ್ಲಿ ಕನಿಷ್ಠ 03 ಶೀರ್ಷಿಕೆಗಳಾದರೂ ಪ್ರಕಟವಾಗಿದ್ದಲ್ಲಿ ಮಾತ್ರ ಬಹುಮಾನಕ್ಕೆ ಪರಿಗಣಿಸಲಾಗುವುದು. ಈ ಕೃತಿಗಳು 2022-23 (ಪ್ರಸಕ್ತ ಸಾಲಿಗೆ ಮಾತ್ರ ಸೀಮಿತವಾಗಿದೆ) ಹಿಂದೆ ಮುದ್ರಣಗೊಂಡ ಕೃತಿಗಳು ಹಾಗೂ 2023-24ರ ಸಾಲಿನಲ್ಲಿ ಪ್ರಕಟವಾಗಿರಬೇಕು.
ಬಂಜಾರ ಸಮುದಾಯದ ಸಂಸ್ಕೃತಿ, ಭಾಷೆ, ಸಾಹಿತ್ಯ, ಕಲೆಗಳು, ಕಲಾವಿದರು, ಸಾಂಸ್ಕೃತಿಕ ವೀರರು /ನಾಯಕರು ಹಾಗೂ ಸಾಧಕರು, ಈ ವಿಷಯಗಳಿಗೆ ಪೂರಕವಾಗಿರಬೇಕು ಮತ್ತು ಬಂಜಾರ ಸಮುದಾಯದ ಲೇಖಕರು ಸ್ವತಃ ತಾವೇ ಬರೆದಿರುವ ಸೃಜನಶೀಲ, ಜನಪರ ಬರಹಗಳಾದ ಕಥಾ ಸಂಕಲನ, ಕಾದಂಬರಿ, ಕವನ ಸಂಕಲನ, ಜೀವನ ಚರಿತ್ರೆ ಹಾಗೂ ಪ್ರಬಂಧ ಸಂಕಲನ ಕುರಿತ ಪುಸ್ತಕಗಳನ್ನೂ ಸಹ ಪ್ರಶಸ್ತಿಗಾಗಿ ಪರಿಗಣಿಸಲಾಗುತ್ತದೆ.
ಆಸಕ್ತರು ತಾವು ಪ್ರಕಟಿಸಿದ ಕೃತಿಯ 03 ಪ್ರತಿಗಳೊಂದಿಗೆ ಸ್ವ ವಿವರಗಳನ್ನು ಒಳಗೊಂಡ ಅರ್ಜಿಯನ್ನು ದಿನಾಂಕ: 30.11.2024ರ ಒಳಗಾಗಿ ಕಚೇರಿ ವೇಳೆಯಲ್ಲಿ ಅಕಾಡೆಮಿಗೆ ಖುದ್ದಾಗಿ ಸಲ್ಲಿಸಲು ಅಥವಾ ಅಂಚೆ, ಕೋರಿಯರ್ ಮೂಲಕ ಕಳುಹಿಸಿಕೊಡಲು ಕೋರಿದೆ.
ವಿಳಾಸ, ರಿಜಿಸ್ಟ್ರಾರ್, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಕನ್ನಡ ಭವನ , 1 ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-560002
ಹೆಚ್ಚಿನ ಮಾಹಿತಿಗಾಗಿ : 080-29917745




