ಧಾರವಾಡ: ಕನ್ನಡದ ಹೆಸರಾಂತ ಸಾಹಿತಿ, ವಿಮರ್ಶಕ ಡಾ. ಗಿರಡ್ಡಿ ಗೋವಿಂದರಾಜ ಅವರ ಹೆಸರಲ್ಲಿ ನಿಡುವ “ವಿಮರ್ಶಾ ಪ್ರಶಸ್ತಿಗೆ” ವಿಮರ್ಶಾ ಕೃತಿಗಳನ್ನು ಆಹ್ವಾನಿಸಲಾಗಿದೆ.
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
- ಕನ್ನಡ, ಕನ್ನಡಿಗರ ಪರ ದುಂಡುಮೇಜಿನ ಸಭೆ
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
ಡಾ. ಗಿರಡ್ಡಿ ಗೋವಿಂದರಾಜ ಅವರ ಸ್ಮರಣಾರ್ಥ ಪ್ರತಿ ವರ್ಷ ಕನ್ನಡದ ಒಂದು ಸ್ವತಂತ್ರ ವಿಮರ್ಶಾ ಕೃತಿಗೆ ಧಾರವಾಡದ ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ಪ್ರಶಸ್ತಿ ನೀಡಲು ನಿರ್ಧರಿಸಿದೆ.
ಪ್ರಸ್ತುತ ಪ್ರಶಸ್ತಿಯನ್ನು ೦೧-೦೧-೨೦೨೩ ರಿಂದ ೩೧-೧೨-೨೩ರ ವರೆಗೆ ಪ್ರಥಮ ಸಲ ಮುದ್ರಣಗೊಂಡಿರುವ ಕನ್ನಡದ ವಿಮರ್ಶಾ ಕೃತಿಗೆ ನೀಡಲಾಗುವುದು. ಪ್ರಶಸ್ತಿ ೨೫ ಸಾವಿರ ರೂಪಾಯಿ ನಗದು ಮತ್ತು ಸ್ಮರಣಿಕೆ ಒಳಗೊಂಡಿರುತ್ತದೆ. ಒಬ್ಬ ವಿಮರ್ಶಕರ ಒಂದು ಕೃತಿಯನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಗೆ ಕಳುಹಿಸುವ ಕೃತಿಯ ೪ ಪ್ರತಿಗಳನ್ನು ೩೦-೦೬-೨೦೨೪ (೩೦ ಜೂನ್, ೨೦೨೪) ರೊಳಗಾಗಿ ತಲುಪುವಂತೆ ಕಳುಹಿಸಬೇಕು.
ವಿಳಾಸ: ಅಧ್ಯಕ್ಷರು, ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್, ಮನೋಹರ ಗ್ರಂಥಮಾಲಾ, ಸುಭಾಸ ರಸ್ತೆ, ಧಾರವಾಡ-೫೮೦೦೦೧
ಅವಧಿ ಮೀರಿ ತಲುಪುವ ಕೃತಿಗಳನ್ನು ಪ್ರಶಸ್ತಿಗೆ ಸ್ವೀಕರಿಸುವುದಿಲ್ಲ. ಸಂಗ್ರಹ, ಸಂಕಲನ, ಅನುವಾದ, ಪಿಎಚ್ಡಿ ಸಂಶೋಧನಾ ಪ್ರಬಂಧಗಳಂಥ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಎಂದು ಫೌಂಡೇಶನ್ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಪ್ರೋ. ಮಲ್ಲಿಕಾರ್ಜುನ ಹಿರೇಮಠ, ಅಧ್ಯಕ್ಷರು, ೯೯೪೫೬ ೦೭೧೪೪.



