ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆಯ ಇ-ಸ್ವತ್ತು ಕಡ್ಡಾಯಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕಾಲಮಿತಿ ಒಳಗೆ ಇ ಸ್ವತ್ತು ವಿತರಿಸಿ ಬಾಕಿ ಇರುವ ಆಸ್ತಿ ತೆರಿಗೆ ಸಂಗ್ರಹಕ್ಕೆ ಅಭಿಯಾನ ಆರಂಭಿಸಲಾಗುವುದು ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಸುಮಾರು 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಣೆ ಮಾಡಲಾಗುವುದು ಎಂದರು.
ಇ ಸ್ವತ್ತು ವಿತರಣೆ ಮುಗಿಯುತ್ತಿದ್ದಂತೆ ಬಾಕಿ ಇರುವ ಆಸ್ತಿ ತೆರಿಗೆ ಸಂಗ್ರಹಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಪಂಚಾಯಿತಿಗಳ ಕಾರ್ಯನಿರ್ವಹಣಾ ಅಧಿಕಾರಿಗಳು ಈ ಬಗ್ಗೆ ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ ಎಂದರು.
ಇನ್ನು ಮುಂದೆ ಗ್ರಾಮೀಣ ಪ್ರದೇಶದ ಯಾವುದೇ ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ. ಹೊಸ ಬಡಾವಣೆಗಳ ನಿರ್ಮಾಣವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಖಾತಾ ಇಲ್ಲದ ಬಹಳಷ್ಟು ಆಸ್ತಿಗಳನ್ನು ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಹಾಗೂ ಮನೆಗಳನ್ನು ನೋಂದಣಿ ಮಾಡುವ ಬಗ್ಗೆ ವರದಿಗಳು ಬರುತ್ತಿದ್ದು, ಇಂತಹ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಈ ವಿಷಯದಲ್ಲಿ ನೋಂದಣಿ ಇಲಾಖೆ ಮತ್ತು ಪಂಚಾಯತಿಗಳು ಸಮನ್ವಯತೆಯಿಂದ ಕೆಲಸ ಮಾಡಲು ಸೂಚಿಸಲಾಗಿದೆ ಎಂದರು.




