ಕಾಂಗ್ರೆಸ್ ಸರ್ಕಾರದ ದ್ವಿಮುಖ ದೊರಣೆಗೆ ಎಸ್.ಡಿ.ಪಿ.ಐ ಖಂಡನೆ
ಬೆಂಗಳೂರು: ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿ ಮತ್ತು ಅವಮಾನಕಾರಿ ಮಾತುಗಳನ್ನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಇಂದಿಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರದ ನಿಷ್ಪಕ್ಷಪಾತತೆ ಹಾಗೂ ನ್ಯಾಯದ ಬದ್ಧತೆಗೆ ದೊಡ್ಡ ಪ್ರಶ್ನೆ ಎಬ್ಬಿಸುತ್ತದೆ ಎಂದು ಎಸ್.ಡಿ.ಪಿ.ಐ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಶಾಸಕ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೊಪ್ಪಳ ಜಿಲ್ಲಾ ಕನಕಗಿರಿ ತಾಲ್ಲೂಕಿನ ಮುಸಲಾಪುರ ಗ್ರಾಮದ ನಿರಪರಾಧಿ ಮುಸ್ಲಿಂ ಯುವಕನ ಮೇಲೆ ಮಾತ್ರ ಪ್ರಕರಣ ದಾಖಲಿಸಿ ಬಂಧಿಸಿರುವುದು ಸಂಪೂರ್ಣ ಅನ್ಯಾಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ.
ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಈ ಪಕ್ಷಪಾತಿ ನಿಲುವು, ಸಮಾಜದಲ್ಲಿ ಅಸಮಾಧಾನ ಹಾಗೂ ಅನಿಶ್ಚಿತತೆ ಹುಟ್ಟಿಸುವಂತದ್ದು.
ಯತ್ನಾಳ್ರ ಅವಮಾನಕಾರಿ ಹೇಳಿಕೆಗಳನ್ನು ಕಡೆಗಣಿಸಿ, ಅದನ್ನು ಪ್ರಶ್ನಿಸಿದ ಸಾಮಾನ್ಯ ಯುವಕನ ವಿರುದ್ಧ ಕ್ರಮ ಕೈಗೊಳ್ಳುವುದು ನ್ಯಾಯದ ಹಾಸ್ಯ ಮಾಡಿರುವಂತಾಗಿದೆ ಎಂದು ಎಸ್ ಡಿ ಪಿ ಐ ಹೇಳಿದೆ.
ಎಸ್.ಡಿ.ಪಿ.ಐ ಕರ್ನಾಟಕದ ಸ್ಪಷ್ಟ ಬೇಡಿಕೆಗಳು
* ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು.
* ಮುಸಲಾಪುರದ ನಿರಪರಾಧಿ ಯುವಕನ ಮೇಲೆ ದಾಖಲಿಸಿದ FIR ಹಿಂಪಡೆಯಬೇಕು ಮತ್ತು ಅವನಿಗೆ ನ್ಯಾಯ ಒದಗಿಸಬೇಕು.
* ಸರ್ಕಾರವು ಕಾನೂನನ್ನು ಎಲ್ಲರ ಮೇಲೂ ಸಮಾನವಾಗಿ ಜಾರಿಗೆ ತರುವಂತೆ ಕ್ರಮ ಕೈಗೊಳ್ಳಬೇಕು.
ಕಾಂಗ್ರೆಸ್ ಸರ್ಕಾರವು ಈ ದ್ವಿಮುಖ ನೀತಿ ಮುಂದುವರೆಸಿದರೆ, ಕರ್ನಾಟಕ ಪ್ರಜಾಪ್ರಭುತ್ವದ ಹಿತಕ್ಕಾಗಿ ಹಾಗೂ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಬೃಹತ್ ಹೋರಾಟ ಆರಂಭಿಸಲು ಹಿಂಜರಿಯುವುದಿಲ್ಲ ಎಂದು ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯ ಸರಕಾರವನ್ನು ಈ ಮೂಲಕ ಎಚ್ಚರಿಸುತ್ತಿದೆ.




