ಹಾವೇರಿ: ಏಲಕ್ಕಿ ನಾಡು ಹಾವೇರಿ ಜಿಲ್ಲೆಯ ಅನ್ನದಾತರ ನಿದ್ದೆಗೆಡಿಸಿದ್ದ ಜಾನುವಾರು ಕಳ್ಳರನ್ನು ಶಿಗ್ಗಾಂವಿ ತಾಲೂಕಿನ ಬಂಕಾಪುರ ಪೊಲೀಸರು ಬಂಧಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಬಂಧಿತರನ್ನು ದಾದಾಪೀರ್ ಕಡೇಮನಿ (35), ಜುಬೇರ್ (25), ಅಬ್ದುಲ್ ಸತ್ತಾರ್ (38), ಫಾರೂಕ್ (23) ಮತ್ತು ಅಕ್ರಂ ಅಲಿ (25) ಎಂದು ಗುರುತಿಸಲಾಗಿದೆ.
ಬಂಧಿತರಿಂದ 7.50 ಲಕ್ಷ ರೂ. ಮೌಲ್ಯದ ಮೂರು ಎತ್ತುಗಳು ಮತ್ತು ಬೊಲೆರೋ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇವರು ಕದ್ದ ಜಾನುವಾರುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ಫೆಬ್ರವರಿ 22 ರಂದು ಆರೋಪಿಗಳು ಶಿಗ್ಗಾಂವಿ ತಾಲೂಕಿನ ಕಲ್ಯಾಣ ಗ್ರಾಮದಲ್ಲಿ ಒಂದು ಎತ್ತನ್ನು ಕಳ್ಳತನ ಮಾಡಿದ್ದರು. ಅಲ್ಲದೇ ಅಗಡಿ ಗ್ರಾಮದಲ್ಲಿ ಎರಡು ಎತ್ತುಗಳನ್ನು ಕದ್ದು ಪರಾರಿಯಾಗಿದ್ದ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು.
ಪ್ರಕರಣದ ಬೆನ್ನುಹತ್ತಿ ಹೊರಟ ಪೊಲೀಸರು, ಬಾಡದ ಅರಮನೆ ಬಳಿ ಆರೋಪಿಗಳನ್ನು ಬಂಧಿಸಿ, ವಿಚಾರಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳು ಜಾನುವಾರುಗಳ ಕಳ್ಳತನ ಮಾಡಿರುವ ವಿಷಯ ಬಾಯಿ ಬಿಟ್ಟಿದ್ದಾರೆ.
ರಾತ್ರೋರಾತ್ರಿ ಎತ್ತುಗಳ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವುದು ಹಾವೇರಿ ಜಿಲ್ಲೆಯ ರೈತರಲ್ಲಿ ಸಮಾಧಾನ ಮೂಡಿಸಿದೆ.
ಮನೆಯ ಬಯಲಿನಲ್ಲಿ ಕಟ್ಟುತ್ತಿದ್ದ ರೈತರ ಜಾನುವಾರುಗಳನ್ನೇ ಇವರು ಟಾರ್ಗೆಟ್ ಮಾಡುತ್ತಿದ್ದರು. ರಾತ್ರಿ ಯಾರಿಗೂ ಗೊತ್ತಾಗದಂತೆ ಕ್ಯಾಪ್ ಹಾಕಿಕೊಂಡು ಬಂದು ಜಾನುವಾರು ಕಳ್ಳತನ ಮಾಡುತ್ತಿದ್ದರು. ಈ ಕುರಿತು ಹಾವೇರಿ ಜಿಲ್ಲೆಯಲ್ಲಿ ಹಲವು ರೈತರು ಪೊಲೀಸರಿಗೆ ದೂರು ನೀಡಿದ್ದರು.
ಕೆಲವು ರೈತರು ಲಕ್ಷಾಂತರ ರೂ ಮೌಲ್ಯದ ಎತ್ತುಗಳನ್ನು ಕಳೆದುಕೊಂಡು, ಕಂಗಾಲಾಗಿದ್ದರು. ಇನ್ನು ಈ ಆರೋಪಿಗಳು ಕಟ್ಟುಮಸ್ತಾದ ಜಾನುವಾರುಗಳನ್ನು ಹೆಚ್ಚಿನ ಬೆಲೆಗೆ ಬೇರೆ ರೈತರಿಗೆ ಮಾರಾಟ ಮಾಡುತ್ತಿದ್ದರು. ಸಣಕಲು ಜಾನುವಾರುಗಳನ್ನು ಕಸಾಯಿಖಾನೆಗಳಿಗೆ ಮಾರಾಟ ಮಾಡುತ್ತಿರುವ ಶಂಕೆ ಪೊಲೀಸರಿಂದ ವ್ಯಕ್ತವಾಗಿದೆ.




