ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಚುರುಕಾಗಿದ್ದು, ಭೂಮಿ ಸಿದ್ಧತೆ, ಸಮಗ್ರ ಬೆಳೆ ನಿರ್ವಹಣೆ ಜೊತೆಗೆ ಉತ್ತಮ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಬಹು ಮುಖ್ಯ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಉತ್ತಮ ಬೆಳವಣಿಗೆ ಹಾಗೂ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಅತ್ಯಮೂಲ್ಯವಾಗಿವೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ನಿಗದಿಪಡಿಸಿದ ಸಹಕಾರಿ ಸಂಘಗಳ ಮೂಲಕ ರಿಯಾಯತಿ ದರದಲ್ಲಿ ವಿವಿಧ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗುವುದು.
ಜಿಲ್ಲೆಯ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಲಭ್ಯವಿದೆ. ರೈತರಿಗೆ ಯಾವುದೇ ಬಿತ್ತನೆ ಬೀಜಗಳ ಕೊರತೆಯಾಗುವುದಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಕಳಪೆ, ಬಿಡಿ ಬಿತ್ತನೆ ಬೀಜದ ಹಾವಳಿ ಹೆಚ್ಚಾಗುತ್ತಿದ್ದು, ಅಲ್ಲಲ್ಲಿ ರೈತರು ಅನಧಿಕೃತ ಲೂಸ್ ಬಿತ್ತನೆ ಬೀಜಗಳನ್ನು ಖರೀದಿಸುತ್ತಿರುವುದಾಗಿ ತಿಳಿದು ಬಂದಿದೆ.
ಹಲವರು ಲೂಸ್ ಬೀಜಗಳನ್ನು ವಿವಿಧ ಭಾಗಗಳಿಂದ ಸಂಗ್ರಹಿಸಿ ರೈತರಿಗೆ ಮಾರಾಟ ಮಾಡುತ್ತಿರುವ್ಯದು ಸಹಾ ಕಂಡು ಬಂದಿರುತ್ತದೆ. ರೈತರು ಬಿಡಿ ಬೀಜಗಳನ್ನು ಖರೀದಿಸಿ ಬಿತ್ತನೆ ಮಾಡಿ ತೊಂದರೆ ಹಾಗೂ ಬೆಳೆ ನಷ್ಠ ಅನುಭವಿಸಿದಲ್ಲಿ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಪರಿಹಾರ ಪಡೆಯಲು ಅರ್ಹರಾಗುವುದಿಲ್ಲ.
ಆದ್ದರಿಂದ ರೈತರು ಲೂಸ್ ಬಿತ್ತನೆ ಬೀಜ ಮಾರಾಟ ಜಾಲಕ್ಕೆ ಸಿಲುಕದೇ ಉತ್ತಮ ಗುಣಮಟ್ಟದ ದೃಢೀಕೃತ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಿಂದ, ಅಧಿಕೃತ ಕೃಷಿ ಪರಿಕರ ಮಾರಾಟಗಾರರಿಂದ ಖರೀದಿಸಿ ಬಿತ್ತನೆ ಮಾಡಲು ರೈತರಲ್ಲಿ ಕೋರಲಾಗಿದೆ.
ಜಿಲ್ಲೆಯಲ್ಲಿ ಯಾವುದೇ ಅನಧಿಕೃತ ಲೂಸ್ ಬಿತ್ತನೆ ಬೀಜ ದಾಸ್ತಾನು ಹಾಗೂ ಮಾರಾಟ ಮಾಡುವವರು ಕಂಡು ಬಂದಲ್ಲಿ ತಕ್ಷಣ ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಮೊ.ಸಂ. 8277931106 & 8277931207 ರವರಿಗೆ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು , ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.




