ಬೆಂಗಳೂರು: 11-7-2024ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 3ನೇ ಸಭೆ ನಡೆದು, ಜುಲೈ 12ರಂದು ಈ ತಿಂಗಳ ಕೊನೆಯವರೆಗೆ ಸುಮಾರು 20 ದಿನ ಪ್ರತೀ ದಿನ 1 ಟಿಎಂಸಿ ಯಂತೆ 20 ಟಿಎಂಸಿ ನೀರು ಬಿಡಲು ಆದೇಶಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಆದೇಶ ಬಂದಿರುವುದಕ್ಕೆ ಸಂಬಂಧಿಸಿದಂತೆ ಇಂದು ನಡೆದ ಸರ್ವಪಕ್ಷ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ 9.4 ಟಿಎಂಸಿ, July ನಲ್ಲಿ 31.24 ಟಿಎಂಸಿ ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43 ಟಿಎಂಸಿ ಬಿಡಬೇಕಾಗಿದೆ. ಇಲ್ಲಿಯವರೆಗೂ 5 ಟಿಎಂಸಿ ಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ ಎಂದರು.
ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜುಲೈ 12ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದೆವು ಎಂದರು.
ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಬಿಜೆಪಿ, ಜೆಡಿಎಸ್, ರೈತ ಸಂಘದವರು, ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರು ಸೇರಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.
ನಮ್ಮ ಕಾವೇರಿ ತೀರದ ಜಲಾಶಯಗಳಲ್ಲಿ 63% ಮಾತ್ರ ಭರ್ತಿ ನೀರು ಆಗಿದೆ. ಕಬಿನಿ ಜಲಾಶಯ ಭರ್ತಿಯಾಗಿದ್ದು, ಕಳೆದ ಎರಡು ದಿನ 20 ಸಾವಿರ, 19 ಸಾವಿರ ಹಾಗೂ ಇಂದು 13 ಸಾವಿರ ಕ್ಯೂಸೆಕ್ಸ್ ನೀರು ಹರಿದು ಹೋಗಿದೆ. ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಮಾತ್ರ ಹರಿದುಹೋಗಿದೆ ಎಂದರು.
ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ. ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು ಮೊಂಡಾಟ ಮಾಡುತ್ತಿದ್ದೇವೆ ಎಂದು ಕಾವೇರಿ ನೀರು ನಿರ್ವಹಣಾ ಸಮಿತಿಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ ಎಂದರು.




