ಕಾರವಾರ: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ಆಗಸ್ಟ್ 1 ರಂದು ಆಯೋಜಿಸುವ ವ್ಯಸನ ಮುಕ್ತ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವಂತೆ ಮತ್ತು ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ನಿರ್ದೇಶನ ನೀಡಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕಚೇರಿ ಸಭಾಂಗಣದಲ್ಲಿ, ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಗಸ್ಟ್ 1 ರಂದು ನಡೆಯುವ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತಂತೆ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿ, ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸುವಂತೆ ತಿಳಿಸಿದರು. ಮದ್ಯ ಮತ್ತು ಮಾದಕ ವ್ಯಸನಗಳಿಂದ ಮುಕ್ತರಾದವರನ್ನು ಅಭಿನಂದಿಸುವ ಕಾರ್ಯಕ್ರಮ ಆಯೋಜಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್, ಗ್ರೇಡ್-2 ತಹಶೀಲ್ದಾರ ರೂಪಾ ಬಾಡಕರ, ಮೆಡಿಕಲ್ ಕಾಲೇಜಿನ ಮನೋವೈದ್ಯ ವಿಭಾಗದ ಮುಖ್ಯಸ್ಥ ಡಾ.ವಿಜಯರಾಜ ಎನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಎಸ್ ಯೂಸಫ್ ಖಾನ್, ಪೊಲೀಸ್ ಇನ್ಸಪೆಕ್ಟರ್ ನಿತ್ಯಾನಂದ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾನಾಯ್ಕ, ಶಾಲಾ ಶಿಕ್ಷಣ ಇಲಾಖೆಯ ಕಲ್ಪನಾ ನಾಯಕ ಹಾಜರಿದ್ದರು.




