ಬೆಂಗಳೂರು: ವಿವಿಧ ನೆಪಗಳನ್ನು ಮುಂದೊಡ್ಡಿ ಕಾಂಗ್ರೆಸ್ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ಸಂಚು ಮಾಡಿದೆ. ಹೀಗಾಗಿ ಸಯಾರಿಗಾದರೂ ನೋವಾದರೆ ಎಲ್ಲರೂ ಒಟ್ಟಾಗಬೇಕು. ಖುಷಿಪಡುವುದನ್ನು ಮೊದಲು ಬಿಡಿ. ಒಗ್ಗಟ್ಟಿದ್ದರೆ ಮಾತ್ರ ಖುಷಿ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಇಂದಿರಾಗಾಂಧಿ ಪುಣ್ಯ ಸ್ಮರಣೆ ಮತ್ತು ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಏನಾದರೂ ಆದರೆ ಇನ್ನೊಬ್ಬರು ಖುಷಿ ಪಡುವುದು, ಶಿವಕುಮಾರ್ ಅವರಿಗೆ ಏನಾದರೂ ಆದರೆ ಮತ್ತೊಬ್ಬರು ಖುಷಿ ಪಡುವುದನ್ನು ಬಿಡಬೇಕು. ಏನೇ ಆದರೂ ಒಗ್ಗಟ್ಟಾಗಿರಬೇಕು ಎಂದು ಮುಖಂಡರಿಗೆ ಕರೆನೀಡಿದರು.
ಒಬ್ಬರನ್ನು ಕಂಡರೆ ಮತ್ತೊಬ್ಬರು ಉರಿದುಕೊಳ್ಳಬೇಡಿ. ನಿಮ್ಮನ್ನು ಅಟ್ಟಕ್ಕೇರಿಸಿ ಪಕ್ಷ ಹಾಳು ಮಾಡುವವರಿದ್ದಾರೆ. ಅವರು ಹೇಳಿದಂತೆ ಕೇಳಿದರೆ ಪಕ್ಷವೇ ಒಡೆದು ಹೋಗುತ್ತದೆ. ಮೊದಲು ನೀವು ಎಚ್ಚೆತ್ತುಕೊಳ್ಳಿ. ಒಗ್ಗಟ್ಟಿನಿಂದ ಎಲ್ಲರೂ ಹೋರಾಟ ಮಾಡಿದರೆ ಪಕ್ಷ ಬಲಗೊಳ್ಳುತ್ತದೆ. ಎಲ್ಲರೂ ಒಂದಾಗಿದ್ದರೆ ಯಾರೂ ನಿಮ್ಮ ಮೇಲೆ ಕೈ ಎತ್ತುವುದಿಲ್ಲ ಎಂದರು.
ರಾಜ್ಯ ರಾಜಕಾರಣದ ವಿಚಾರದಲ್ಲಿ ನಾನು ಕೈ ಹಾಕುವುದಿಲ್ಲ. ಏನೇ ಕೇಳಿದರೂ ರಾಜ್ಯದ ನಾಯಕರನ್ನು ಕೇಳಿ ಎಂದು ಹೇಳುತ್ತೇನೆ. ನಾನೇನಾದರೂ ಮಾತನಾಡಿದರೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗುತ್ತದೆ. ಅದಕ್ಕೆ ನಾನು ಏನೂ ಮಾತನಾಡುವುದಿಲ್ಲ. ಇಲ್ಲಿ ನೀವೇ ಬಗೆಹರಿಸಿಕೊಳ್ಳಬೇಕು ಎಂದು ರಾಜ್ಯ ನಾಯಕರಿಗೆ ಸಲಹೆ ನೀಡಿದರು.




