ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ರಾಷ್ಟ್ರದ ಎಲ್ಲಾ ರಾಜ್ಯಗಳಿಗೆ ನ್ಯಾಯ ದೊರಕಿಸುವಲ್ಲಿ ವಿಫಲವಾಗಿದೆ. ಬಿಹಾರ್, ಆಂಧ್ರಪ್ರದೇಶ ಮತ್ತು ಅಸ್ಸಾಂ ರಾಜ್ಯಗಳನ್ನು ಹೊರತುಪಡಿಸಿ ಯಾವುದೇ ರಾಜ್ಯಗಳಿಗೆ ಸೂಕ್ತ ಅನುದಾನ ನೀಡಿಲ್ಲ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಈ ಬಜೆಟ್ ಜನಸಾಮಾನ್ಯರ ವಿರುದ್ಧವಾಗಿದೆ. ಇದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಶೋಷಿತ ವರ್ಗಗಳಿಗೆ ವಿರುದ್ಧವಾಗಿದೆ.ಯಾವುದರಲ್ಲಿಯೂ ಸರ್ವತೋಮುಖ ಕಾರ್ಯಕ್ರಮಗಳನ್ನು ರೂಪಿಸಿಲ್ಲ.
ಶೋಷಿತ ವರ್ಗಗಳಿಗೆ ಅನ್ಯಾಯ: ಐವತ್ತು ಲಕ್ಷಕ್ಕೂ ಮೇಲ್ಪಟ್ಟ ಬಜೆಟ್ ನಲ್ಲಿ ಸುಮಾರು 10 ಲಕ್ಷಕ್ಕೂ ಮೇಲ್ಪಟ್ಟು ಶೋಷಿತ ವರ್ಗಗಳಾದ ಎಸ್ಸಿ ಎಸ್ಟಿ ಸಮುದಾಯದವರಿಗೆ ಅವಕಾಶ ಇರಬೇಕಿತ್ತು.
ಭಾತರ ದೇಶದಲ್ಲಿ ಸುಮಾರು ಶೇ 20% ರಷ್ಟು ಜನಸಂಖ್ಯೆ ಯನ್ನು ಹೊಂದಿರುವ ಈ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಕಾಳಜಿ ಇಲ್ಲ. ಸಂವಿಧಾನ ಬದ್ದವಾಗಿ ಈ ರಾಷ್ಟ್ರದಲ್ಲಿ ಸಿಗುತ್ತಿಲ್ಲಾ. ಒಂದು ಕಡೆ ಸೀಮಿತವಾಗಿ ಕೆಲವು ರಾಜ್ಯಗಳಿಗೆ ಸಂಪೂರ್ಣ ಪ್ರೋತ್ಸಾಹ ನೀಡುವುದು ಉಳಿದ ರಾಜ್ಯಗಳಿಗೆ ಮಲತಾಯಿ ಧೋರಣೆ ತೋರಿದೆ.
ಭಾರತದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ಆದರೂ ಕೂಡ ಈ ರಾಜ್ಯಕ್ಕೆ ಮುಖ್ಯಮಂತ್ರಿ ರಾಜ್ಯದಲ್ಲಿ ಹಲವಾರು ಯೋಜನೆಗಳ ಪ್ರಸ್ತಾವನೆಯನ್ನು ಸಲ್ಲಿಸಿದರು ಮೆಟ್ರೋ, ವರ್ತುಲ ರಸ್ತೆ, ರಾಷ್ಟ್ರೀಯ ಹೆದ್ದಾರಿಗಳು ಇವುಗಳಿಗೆ ಯಾವುದೇ ರೀತಿಯ ಸ್ಪಂದನೆ ಇಲ್ಲ. ಆದ್ದರಿಂದ ಈ ಬಜೆಟ್ ನೀರಸವಾಗಿದೆ ಮತ್ತು ರೈತರ ಪರವಾಗಿಲ್ಲ. ಇದು ಜನ-ವಿರೋಧಿ ಬಜೆಟ್ ಆಗಿದೆ.
– ಕೆ ಎಚ್ ಮುನಿಯಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ




