ಬೆಳಗಾವಿ: ಕೇಂದ್ರೀಯ ಶಾಲೆಗಳ ಮಟ್ಟಕ್ಕೆ ರಾಜ್ಯದ ಶಾಲೆಗಳಲ್ಲೂ ಕಲಿಸಬೇಕು ಎಂಬ ದೃಷ್ಟಿಯಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕೇಂದ್ರೀಯ ಪಠ್ಯ ಕ್ರಮ ಅನುಸರಿಸಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ನ ಅನಿಲ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಮಧು ಬಂಗಾರಪ್ಪ, ಪ್ರಸ್ತುತ ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್ಇ ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದರು.
ಆರ್ ಟಿ ಇ ಕಾಯ್ದೆಯ ಅನುಷ್ಠಾನದಿಂದ 1 ರಿಂದ 8ನೇ ತರಗತಿಯವರೆಗೆ ಪ್ರವೇಶ ಶುಲ್ಕವನ್ನು ಸರ್ಕಾರವೇ ನೀಡುತ್ತಿದ್ದು, 8ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೂ ಯೋಜನೆಯನ್ನು ವಿಸ್ತರಿಸುವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಬಡ ಮಕ್ಕಳಿಗೆ ಅನುಕೂಲ ವಾಗಲಿದೆ ಎಂದರು.




