ಬೆಂಗಳೂರು: ಜಿಲ್ಲೆಗಳಲ್ಲಿ ಅತ್ಯಂತ ದುರ್ಬಲವಾಗಿರುವ ಗ್ರಾಮ ಪಂಚಾಯತಿಯನ್ನು ಆರಿಸಿಕೊಂಡು ಅವುಗಳ ಸಮಗ್ರ ಅಭಿವೃದ್ಧಿ ಸಲುವಾಗಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ‘ಕಾಯಕ ಗ್ರಾಮ’ ಯೋಜನೆಯಡಿ ದತ್ತು ಸ್ವೀಕಾರ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸಲಹೆ ನೀಡಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಗ್ರಾಮೀಣ ನೀರು ಸರಬರಾಜು ಇಲಾಖೆಯು ಗ್ರಾಮೀಣ ಕರ್ನಾಟಕದ ಕುಡಿಯುವ ನೀರು ಸರಬರಾಜು ಸ್ಥಿಗತಿಗಳ ಕುರಿತು ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿ, ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜಿನಿಯರ್ಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಗ್ರಾಮಗಳಲ್ಲಿ ಸುಸ್ಥಿರ ಜಲ ಹಾಗೂ ಸುಸ್ಥಿರ ವಿದ್ಯುತ್ ಸರಬರಾಜು ಮಾಡುವ ಮಹತ್ತರ ಆಶಯವನ್ನು ಈ ಬಾರಿ ಕಾರ್ಯಗತಗೊಳಿಸಲು ಮೊದಲ ಹೆಜ್ಜೆ ಇರಿಸಲಾಗಿದೆ. ಗ್ರಾಮಗಳ ಸುಧಾರಣೆ, ಆರ್ಥಿಕ ಸುಸ್ಥಿರತೆಯ ಬಗ್ಗೆ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ವತಂತ್ರವಾಗಿ ಯೋಚನೆ ಮಾಡಬೇಕು. ಪ್ರವಾಸಿ ಸ್ಥಳಗಳಲ್ಲಿನ ಗ್ರಾಮ ಪಂಚಾಯತಿ ಆಸ್ತಿಗಳನ್ನು ವರಮಾನ ಮೂಲ ಆಸ್ತಿಗಳನ್ನಾಗಿಸಬೇಕು ಎಂದು ಸೂಚಿಸಿದರು.
ದೇಶದಲ್ಲಿನ ಪಂಚಾಯತ್ ಸಂಸ್ಥೆಗಳಲ್ಲಿ ಕರ್ನಾಟಕ ಅಳವಡಿಸಿಕೊಂಡಿರುವ ಪದ್ಧತಿಗಳನ್ನು ಗುರುತಿಸಿ ಕೇಂದ್ರ ಸರ್ಕಾರ ಪ್ರಥಮ ಸ್ಥಾನ ನೀಡಿದೆ. ಈ ಬಾರಿ ಗ್ರಾಮ ಪಂಚಾಯತಿಗಳಲ್ಲಿ ₹1,271 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸುವ ಮೂಲಕ ಅತಿ ಹೆಚ್ಚು ಕರಸಂಗ್ರಹಣೆಯ ಹೆಗ್ಗಳಿಕೆಗೆ ಪಾತ್ರರಾಗಿದ್ದೇವೆ ಎಂದರು.
ಈ ಎರಡೂ ಸಾಧನೆಗಳಿಗೆ ಸಾರಥ್ಯವಹಿಸಿದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.




