ಕೇಂದ್ರ ಸರ್ಕಾರದ ಅನ್ಯಾಯಗಳ ಸರಣಿಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ 15ನೇ ಹಣಕಾಸು ಆಯೋಗದ ಅನುದಾನದ ಬಾಕಿಯೂ ಪ್ರಮುಖವಾದುದು. ಗ್ರಾಮಗಳ ಅಭಿವೃದ್ಧಿಗೆ ಹಿನ್ನೆಡೆಯಾಗುತ್ತಿರುವ ಈ ಅನ್ಯಾಯದ ಬಗ್ಗೆ ಸಾಕಷ್ಟು ಬಾರಿ ಗಮನ ಸೆಳೆದರೂ ಕರ್ನಾಟಕದೆಡೆಗಿನ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಮುಂದುವರೆದಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
2026ರ ಫೆಬ್ರವರಿಯಲ್ಲಿ ಗ್ರಾಮ ಪಂಚಾಯಿತಿಗಳ ಅವಧಿ ಮುಗಿಯುತ್ತಿದ್ದರೂ ₹2,186 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡದಿರುವುದು ಗ್ರಾಮೀಣ ಕರ್ನಾಟಕಕ್ಕೆ ಎಸಗುತ್ತಿರುವ ಮಹಾದ್ರೋಹವೇ ಸರಿ.
ತಕ್ಷಣವೇ 15ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪತ್ರ ಬರೆದಿದ್ದೇನೆ.
ಗ್ರಾಮೀಣ ನೀರು ಮತ್ತು ನೈರ್ಮಲ್ಯ ಕಾಮಗಾರಿಗಳು, ವಿಕಲಚೇತನರ ಕಲ್ಯಾಣ, ರಸ್ತೆ ಮುಂತಾದ ಕಾರ್ಯಕ್ರಮಗಳಿಗೆ ಬಳಕೆಯಾಗುವ ಈ ಅನುದಾನವನ್ನು ಬೇರೆಲ್ಲ ರಾಜ್ಯಗಳಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾತ್ರ ಮಲತಾಯಿ ಧೋರಣೆ ತೋರುತ್ತಿರುವುದೇಕೆ?
ರಾಜ್ಯದ BJP Karnataka ನಾಯಕರಿಗೆ ಕರ್ನಾಟಕದ ಬಗ್ಗೆ, ಕನ್ನಡಿಗರ ಬಗ್ಗೆ ಕಾಳಜಿ ಇದ್ದರೆ ಈ ಅನ್ಯಾಯದ ಕುರಿತು ನಮ್ಮೊಂದಿಗೆ ದನಿಗೂಡಿಸಲಿ.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ




