ಜನವರಿ 26 ರ ದಿನಾಂಕದಂದು ದೇಶದೆಲ್ಲೆಡೆ ನಾವು ಸಂವಿಧಾನ ದಿನಾಚರಣೆಯನ್ನು ಆಚರಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮನವನ್ನು ಸಲ್ಲಿಸಿದ್ದೇವೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಇಡೀ ದೇಶವೇ ಎಲ್ಲರ ಹಿತ ಕಾಯುವ ಮತ್ತು ಜನ ಸಾಮಾನ್ಯರ ಸಮಾನವಾದ ಏಳಿಗೆಯನ್ನು ಬಯಸಿದ ದೇಶದ ಸಂವಿಧಾನಕ್ಕೆ ನಮನ ಸಲ್ಲಿಸುತ್ತಿದ್ದರೆ ಅತ್ತ ಭಾರತದ ಭಾಗವೇ ಆಗಿರುವ ಉತ್ತರ ಪ್ರದೇಶದಲ್ಲಿ ಶಾಂಭವಿ ಪೀಠಾಧೀಶ್ವರ ಸ್ವಾಮಿ ಆನಂದ್ ಸ್ವರೂಪ್ ಮಹಾರಾಜ್ ಅವರು ರಾಮರಾಜ್ಯ, ಮನುಸ್ಮೃತಿ, ಧರ್ಮಶಾಸ್ತ್ರ ಹಾಗೂ ಚಾಣಕ್ಯನ ಪುಸ್ತಕಗಳನ್ನು ಆಧರಿಸಿದ, 501 ಪುಟಗಳ ಸಂವಿಧಾನವನ್ನು ಫೆಬ್ರವರಿ 3 ನೇ ತಾರೀಖಿನಂದು ಮಹಾಕುಂಭ ಮೇಳದಲ್ಲಿ ಅನಾವರಣ ಮಾಡುವುದಾಗಿ ಹೇಳಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ದೇಶದಲ್ಲಿ ಎಲ್ಲರ ಹಿತ ಕಾಯುವ ಮತ್ತು ಈ ನೆಲದ ಆತ್ಮವೆಂದೇ ಹೆಸರಾದ ಸಂವಿಧಾನವು ಅಸ್ತಿತ್ವದಲ್ಲಿ ಇರುವಾಗ ಇದರ ಮಹತ್ವ ಅರಿಯದೇ ದೇಶದ್ರೋಹದ ಹೇಳಿಕೆ ನೀಡುತ್ತಿರುವ ಸ್ವಾಮೀಜಿಗಳ ಮಾತುಗಳನ್ನು ವರದಿ ಮಾಡಲಾಗಿದೆ ಬಿಟ್ಟರೆ, ಬಹುತೇಕ ಮಾಧ್ಯಮಗಳು ಅದನ್ನು ದ್ರೋಹದ ಕೃತ್ಯ ಎಂದು ಜನರಿಗೆ ತಿಳಿಸುವ ಪ್ರಯತ್ನ ಮಾಡದಿರುವುದು ನನ್ನಲ್ಲಿ ಅಚ್ಚರಿ ಮೂಡಿಸಿದೆ.
ಇತ್ತೀಚೆಗಷ್ಟೇ ಸಂವಿಧಾನದ ಕುರಿತು ಅಪಸ್ವರ ಎತ್ತಿದ್ದ ಉಡುಪಿಯ ಪೇಜಾವರರ ನಂತರ ಇದೀಗ ಸ್ವಾಮೀಜಿಯ ವಲಯದಿಂದಲೇ ಮತ್ತೆ ಸಂವಿಧಾನದ ಕುರಿತು ಅಪಸ್ವರ ಎದ್ದಿದೆ.
ಈ ಅಪಸ್ವರವು ಇತಿಹಾಸ ಪೂರ್ವದಿಂದಲೂ ಇದ್ದು ಇದರ ವಿರುದ್ಧವೇ ಇರುವ ನಮ್ಮೆಲ್ಲರ ಹೋರಾಟವೂ ಅಷ್ಟೇ ಐತಿಹಾಸಿಕವಾಗಿದೆ.
ಹೆಣ್ಣು ಮಕ್ಕಳ ಸಮಾನ ಹಕ್ಕುಗಳನ್ನು ತಿರಸ್ಕರಿಸುವ ಮತ್ತು ಶೋಷಿತರ ನೆರಳನ್ನೂ ಕಂಡರೆ ಅಸಹ್ಯ ಪಡುವ ಮನುಸ್ಮೃತಿ ಮತ್ತು ಮೌಢ್ಯವನ್ನೇ ಉಸಿರಾಡುವ ಧಾರ್ಮಿಕ ಗ್ರಂಥಗಳನ್ನು ಆಧರಿಸಿ ರಚಿಸಿರುವ ಸಂವಿಧಾನವು, ಸಂವಿಧಾನದ ಹೆಸರಲ್ಲಿ ರಚಿತಗೊಂಡಿರುವ ಇನ್ನೊಂದು ಮನುಸ್ಮೃತಿ ಆಗಿದ್ದು ಇದನ್ನು ಬಾಬಾ ಸಾಹೇಬರು ಸುಟ್ಟ ರೀತಿಯಲ್ಲೇ ಮತ್ತೊಮ್ಮೆ ಸುಡಬೇಕಾದ್ದು ಭಾರತೀಯರಾದ ನಮ್ಮೆಲ್ಲರ ಜವಾಬ್ದಾರಿ ಆಗಿದೆ.
ಇನ್ನು ಸಂವಿಧಾನದ ಮಹತ್ವದ ಅರಿಯದೇ, ವಿಷಕಾರಿಯಾಗಿ ವರ್ತಿಸುವ ಇಂತಹ ಸ್ವಾಮೀಜಿಗಳ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ದೇಶದ್ರೋಹದ ಪ್ರಕರಣವನ್ನು ದಾಖಲಿಸಬೇಕು ಎಂದು ಈ ಮೂಲಕ ಆಗ್ರಹಿಸುತ್ತೇನೆ!!
– ಡಾ. ಎಚ್ ಸಿ ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ




