ಮನಸೊರಗೊಂಡ ಚಿಗುರು ಕಾರ್ಯಕ್ರಮ
ಬಳ್ಳಾರಿ: ಬಾಲ ಕಲಾವಿದರ ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಸಿರುಗುಪ್ಪದ ಸಾಹಿತಿ ಹಾಗೂ ರಂಗ ನಿರ್ದೇಶಕ ಕುರುವಳ್ಳಿ ತಿಮ್ಮಯ್ಯ ಕರೆ ನೀಡಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಳ್ಳಾರಿ ವತಿಯಿಂದ ಸಿರುಗುಪ್ಪ ಪಟ್ಟಣದ ಶ್ರೀ ಯಲ್ಲಮ್ಮದೇವಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಚಿಗುರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ನಾಡಿನ ಸಾಂಸ್ಕೃತಿಕ ಪಾರಂಪರಿಕ ಕಲೆಗಳನ್ನು ಉಳಿಸಿ, ಬೆಳೆಸುವ ಉದ್ದೇಶದಿಂದ ಬಾಲ್ಯ ಕಲಾವಿದರು ತಮ್ಮೊಳಗಿನ ಕಲಾಶಕ್ತಿಯನ್ನು ಬಿಂಬಿಸಲು ವೇದಿಕೆ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸಿರುಗುಪ್ಪ ನಗರಸಭೆ ಅಧ್ಯಕ್ಷರಾದ ಬಿ.ರೇಣುಕಮ್ಮ ವೆಂಕಟೇಶ್ ಅವರು ನೆರೆವೇರಿಸಿದರು.
ಶ್ರೀ ಯಲ್ಲಮ್ಮದೇವಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವೈ.ಡಿ.ವೆಂಕಟೇಶ್, ನೃತ್ಯ ಕಲಾವಿದ ಅಭಿಷೇಕ್ ಸೇರಿದಂತೆ ಶಾಲಾ ಮಕ್ಕಳು ಹಾಗೂ ಇತರರು ಉಪಸ್ಥಿತರಿದ್ದರು.
ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಳ್ಳಾರಿಯ ಕುಮಾರಿ ವೀರ ಪಂಚಾಕ್ಷರಿ ಇವರಿಂದ ಕೊಳಲು ವಾದನ, ಕು.ಗೌರಿ ಸೃಜನ ಇವರಿಂದ ಸುಗಮ ಸಂಗೀತ, ಸೂರ್ಯ ಕಲಾ ಟ್ರಸ್ಟ್ ಇವರಿಂದ ಸಮೂಹ ನೃತ್ಯ, ಕು.ಸನ್ನಿಧಿ ಜಿ.ಎಮ್ ಇವರಿಂದ ಜಾನಪದ ಗೀತೆಗಳು, ಸಿರುಗುಪ್ಪದ ಕುಮಾರಿ ಬಿ.ನವ್ಯ ಇವರಿಂದ ಏಕಪಾತ್ರಾಭಿನಯ (ತಾಯಿಯ ಮಮತೆ), ಕುಮಾರಿ ಜೆ.ಎಸ್.ಸಾಹಿತ್ಯ ಸಂಗಡಿಗರಿಂದ ಇವರಿಂದ ನಾಟಕ (ಮೊಬೈಲ್ ಲೋಕ) ಪ್ರದರ್ಶನ ಮನರಂಜಿಸಿತು.



