ಬೆಂಗಳೂರು: ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜ್ ಅವರಿಗೆ ಕಳೆದ ಐದು ದಿನಗಳಿಂದ ಸಿಐಡಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ತಲೆ ಮರೆಸಿಕೊಂಡಿರುವ ಶಾಸಕನಿಗಾಗಿ ಗೋವಾ, ಮಹಾರಾಷ್ಟ್ರ ಭಾಗದಲ್ಲಿ ಹುಡುಕಾಟ ನಡೆಸಿದ್ದು, ಎಲ್ಲಿಯೂ ಭೈರತಿ ಬಸವರಾಜ್ ಪತ್ತೆಯಾಗಿಲ್ಲ. ಪುಣೆಯಲ್ಲಿ ಕೊನೆಯದಾಗಿ ಅವರ ಮೊಬೈಲ್ ಸ್ವಿಚ್ ಆಪ್ ಆಗಿದ್ದು, ಇದಾದ ಬಳಿಕ ಗೋವಾ ಕಡೆಗೆ ಪ್ರಯಾಣ ಮಾಡಿರುವುದು ಬೆಳಕಿಗೆ ಬಂದಿದೆ. ಬಳಿಕ ಎಲ್ಲಿ ಇದ್ದಾರೆ ಎನ್ನುವುದು ಪತ್ತೆಯಾಗಿಲ್ಲ.
ಭೈರತಿ ಬಸವರಾಜ್ ಅವರ ಜಾಮೀನು ಅರ್ಜಿಯು ಜನಪ್ರತಿನಿಧಿಗಳ ಕೋರ್ಟ್ನಲ್ಲಿ ವಜಾಗೊಂಡಿದೆ. ಇದರ ಬೆನ್ನಲ್ಲೇ ಸಿಐಡಿ ಎಸ್ಐಟಿ ಟೀಂ ಮಾಜಿ ಸಚಿವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಕಳೆದ ಜುಲೈ 15ರ ರಾತ್ರಿ ರೌಡಿ ಶೀಟರ್ ಬಿಕ್ಲು ಶಿವನನ್ನು ಹತ್ಯೆ ಮಾಡಲಾಗಿತ್ತು, ಈತನ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ 11ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.
ಜು.15ರ ರಾತ್ರಿ ಬೆಂಗಳೂರಿನ ಹಲಸೂರು (ಭಾರತಿನಗರ) ಪ್ರದೇಶದ ಮೀನಿ ಅವೆನ್ಯೂ ರಸ್ತೆಯಲ್ಲಿ ಆತನ ಮನೆ ಬಳಿ 8-12 ಜನರ ಗುಂಪು ಮಾರಕ ಆಯುಧಗಳಿಂದ ಕೊಚ್ಚಿ, ಬರ್ಬರವಾಗಿ ಹತ್ಯೆ ಮಾಡಿತ್ತು.
ಹತ್ಯೆಯು ಆತನ ತಾಯಿ ಎದುರು ನಡೆದಿದ್ದು, ದಾಳಿಯ ವಿಡಿಯೋಗಳು ಸಹ ಬಯಲಾಗಿವೆ. ಬಿಕ್ಲು ಶಿವನ ತಾಯಿ ವಿಜಯಲಕ್ಷ್ಮಿ ನೀಡಿರುವ ದೂರು ಆಧರಿಸಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಇದರಲ್ಲಿ ಕೆಆರ್ ಪುರ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು ಎ5 ಆರೋಪಿಯಾಗಿ ಹೆಸರಿಸಲಾಗಿದೆ ಬಿಕ್ಲು ಶಿವ ಹತ್ಯೆಗೆ ಪ್ರೇರಣೆ ನೀಡಿದ ಆರೋಪ ಬೈರತಿ ಬಸವರಾಜ್ ಮೇಲಿದೆ. ಈ ಕೇಸ್ನಲ್ಲಿ ಬೈರತಿ ಬಸವರಾಜ್ ಆಪ್ತ ಜಗದೀಶ್ ಅಲಿಯಾಸ್ ಜಗ್ಗ ಎ1 ಆಗಿದ್ದರೆ ಕಿರಣ್ ಸೇರಿದಂತೆ ಹಲವರ ಹೆಸರಿದೆ.




