ದಾವಣಗೆರೆ: ನಮ್ಮ ಸಂಸ್ಕಾರ, ಸ್ವಭಾವದಲ್ಲೇ ಸ್ವಚ್ಛತೆ ಕೂಡಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಬುಧುವಾರ ಗುಂಡಿ ಸರ್ಕಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಮ್ಮ ದೇಹ ಮತ್ತು ಆಹಾರದ ಬಗ್ಗೆ ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ಎಲ್ಲರ ಕರ್ತವ್ಯವಾಗಿದೆ. ಬೀದಿ ಬದಿಯ ವ್ಯಾಪಾರಿಗಳು ಕಸವನ್ನು ಎಲ್ಲೆಂದರಲ್ಲಿ, ಎಸೆಯದೆ ಮಹಾನಗರ ಪಾಲಿಕೆಯ ಕಸ ಸಂಗ್ರಹ ವಾಹನಕ್ಕೆ ನೀಡಿ ಸ್ವಚ್ಛತೆ ಕಾಪಾಡಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ್ ಮಾ.ಕರೆಣ್ಣವರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಹಾನಗರ ಪಾಲಿಕೆ ಆಯುಕ್ತರದ ರೇಣುಕಾ ಮಾತನಾಡಿ ಬೀದಿಬದಿಯ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಬೀದಿ ಬದಿ ಹೋಟೆಲ್, ಇತರೆ ವ್ಯಾಪಾರಿಗಳು ಪ್ಲಾಸ್ಟಿಕ್ ಬಳಸದೆ ಬಾಳೆ ಎಲೆ ಬಳಸಬೇಕು ಎಂದರು.
ಬೀದಿ ಬದಿಯ ವ್ಯಾಪಾರಿಗಳು ತಮ್ಮ ಕೆಲಸ ಮುಗಿದ ನಂತರ ಸಂಜೆ ವೇಳೆ ಮಹಾನಗರ ಪಾಲಿಕೆಯಿಂದ ಕಸ ಸಂಗ್ರಹ ವಾಹನ ಕಳಿಸಲಾಗುವುದು, ಅದರಲ್ಲಿ ಹಸಿ ಕಸ, ಒಣ ಕಸ ಬೇರ್ಪಡಿಸಿ ನೀಡಿ ಸ್ವಚ್ಛತೆ ಕಾಪಾಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರವೀಣ್ ಕುಮಾರ್ ಆರ್ಎನ್, ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಮರ್ ವಿ.ಎಲ್, ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಾಗೇಶ್. ಸಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ರಾಜಶೇಖರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ರಾಘವನ್ ಹಾಗೂ ಇತರರು ಇದ್ದರು.




