ಸಾಹಿತ್ಯ ಸಮ್ಮೇಳನದ ಮಳಿಗೆಗಳಲ್ಲಿ ಇಟ್ಟಿರುವ ಎಲ್ಲ ರಾಜಕೀಯ ಪ್ರೇರಿತ ಪುಸ್ತಕಗಳನ್ನ ತೆರವು ಮಾಡಿ

1 year ago

ಕನ್ನಡ ನಾಡಿನ ನುಡಿ ಪರಂಪರೆ, ಶ್ರೀಮಂತ ಸಾಹಿತ್ಯ, ಇತಿಹಾಸ, ಸಂಸ್ಕೃತಿಯನ್ನ ಸಂಭ್ರಮಿಸುವ ವೇದಿಕೆಯಾಗಬೇಕಿದ್ದ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನ ರಾಜಕೀಯ ವೇದಿಕೆ ಮಾಡಿರುವ ಸಿಎಂ @siddaramaiah ನೇತೃತ್ವದ @INCKarnataka ಸರ್ಕಾರ ತಾಯಿ ಕನ್ನಡಾಂಬೆಗೆ, ಕನ್ನಡಿಗರ ತಾಯ್ನುಡಿಗೆ ಘೋರ ಅಪಮಾನ ಎಸಗಿದ್ದಾರೆ.

ಮುಖ್ಯಮಂತ್ರಿಗಳ ಭಾಷಣದುದ್ದಕ್ಕೂ ರಾಜಕೀಯ ಕೆಸರೆರಚಾಟ, ಪುಸ್ತಕ ಮಳಿಗೆಗಳಲ್ಲಿ ರಾಜಕೀಯ ಪ್ರೇರಿತ ಪುಸ್ತಕಗಳ ಪ್ರದರ್ಶನ, ಮಾರಾಟ – ಇದೇನಾ ಸಾಹಿತ್ಯ ಸಮ್ಮೇಳನದ ಉದ್ದೇಶ?

ಸಾಹಿತ್ಯ ಸಮ್ಮೇಳನದ ಮಳಿಗೆಗಳಲ್ಲಿ ಇಟ್ಟಿರುವ ಎಲ್ಲ ರಾಜಕೀಯ ಪ್ರೇರಿತ ಪುಸ್ತಕಗಳನ್ನ ತೆರವು ಮಾಡಬೇಕು, ರಾಜಕೀಯ ಭಾಷಣಗಳಿಗೆ ಕಡಿವಾಣ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನ ಆಗ್ರಹಿಸುತ್ತೇನೆ.

– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ

Leave a Reply