ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮುಡಾದ 300 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಮುಡಾದಲ್ಲಿ ಅಧಿಕಾರಿಗಳು ‘ಕೋಕೊನಟ್ʼ ಕೋಡ್ವರ್ಡ್ ಬಳಸಿ ಅಕ್ರಮ ವ್ಯವಹಾರಗಳನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಬಿಲ್ಡರ್ ಜಯರಾಮ್ ಮನೆ ಮೇಲೆ ದಾಳಿ ನಡೆಸಿದ್ದರು. ಸತತ ಮೂರು ದಿನ ಇಡಿ ಅಧಿಕಾರಿಗಳು ದಾಳಿ ನಡೆಸಿದಾಗ ಈತನ ಮನೆಯಲ್ಲಿ ಏನಿತ್ತು ಎನ್ನುವ ಅನುಮಾನ ಎಲ್ಲರನ್ನು ಕಾಡುತ್ತಿತ್ತು. ಆದರೆ ಈಗ ಸಿಕ್ಕಿರುವ ಮಾಹಿತಿ ಪ್ರಕಾರ ಮುಡಾ ಅಕ್ರಮದ ಕಿಂಗ್ಪಿನ್ ಜಯರಾಮ್ ಆಗಿದ್ದಾನೆ ಎನ್ನಲಾಗುತ್ತಿದೆ.
ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಬೇನಾಮಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಯರಾಮ್ ಮನೆ ಹಾಗೂ ಕಚೇರಿಯಲ್ಲಿ ಇಡಿ ಅಧಿಕಾರಿಗಳು ನಿರಂತರ 70 ಗಂಟೆಗಳ ಕಾಲ ದಾಳಿ ಮಾಡಿದ್ದರು. ಜಯರಾಮ್ ಮನೆಯಲ್ಲೆ ಬಹುತೇಕ ಬೇನಾಮಿ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು ಸಿಕ್ಕಿದೆ.
ಈ ಜಯರಾಮ್ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘ ಎಂಬ ಗೃಹ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿದ್ದ. ಈ ಸಂಘದಲ್ಲಿ ಮುಡಾ ಮಾಜಿ ಆಯುಕ್ತ ದಿನೇಶ್ ಕುಟುಂಬಸ್ಥರು ನಿರ್ದೇಶಕರಾಗಿದ್ದರು. ಬಹುತೇಕ ಬೇನಾಮಿ ವ್ಯವಹಾರಗಳನ್ನು ಈ ಸಹಕಾರ ಸಂಘದ ಹೆಸರಿನಲ್ಲಿ ಮಾಡಲಾಗಿದೆ. ಜಯರಾಮ್ ಮನೆಯಲ್ಲಿ ದಾಖಲೆಗಳನ್ನು ಶೋಧಿಸುತ್ತಿದ್ದ ಇಡಿ ಆತನ ವಾಟ್ಸಪ್ ಚಾಟ್ ಪರಿಶೀಲಿಸಿದೆ. ಈ ವೇಳೆ 1 ಕೋಕೊನಟ್ ಕಳುಹಿಸಿದ್ದೇನೆ. 50 ಕೋಕೊನಟ್ ಕಳುಹಿಸಿದ್ದೇನೆ ಎಂಬ ಮೆಸೇಜ್ಗಳು ಅಧಿಕಾರಿಗಳ ಗಮನ ಸೆಳೆದಿದೆ.
ರಿಯಲ್ ಎಸ್ಟೇಟ್ ಕೆಲಸ ಮಾಡುವ ಈತ ಕೋಕೊನಟ್ ಯಾಕೆ ಕಳುಹಿಸುತ್ತಾನೆ ಎಂದು ಅನುಮಾನ ಬಂದು ಜಯರಾಮ್ನನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದಾಗ ಕೋಕೊನಟ್ ಸತ್ಯ ಬೆಳಕಿಗೆ ಬಂದಿದೆ. ಮುಡಾ ಹಣಕಾಸಿನ ಅಕ್ರಮಕ್ಕೆ ಕೋಕೊನಟ್ ಎಂಬ ಕೋಡ್ವರ್ಡ್ ಇಡಲಾಗಿತ್ತು. 1 ಕೋಕೊನಟ್ ಅಂದರೆ 1 ಲಕ್ಷ ರೂ., 50 ಕೋಕೊನಟ್ ಅಂದರೆ 50 ಲಕ್ಷ ರೂ., 100 ಕೋಕೊನಟ್ ಅಂದರೆ 1 ಕೋಟಿ ರೂ. ಕಳುಹಿಸಲಾಗಿದೆ ಎಂದು ಜಯರಾಮ್ ಮೆಸೇಜ್ ಮಾಡುತ್ತಿದ್ದ.
ಜಯರಾಮ್ ತನ್ನ ಡೈರಿಯಲ್ಲಿ ಮುಡಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಬರೆದುಕೊಂಡಿದ್ದ. ಇಡಿಯ ಪ್ರಾಥಮಿಕ ವಿಚಾರಣೆಯಲ್ಲೇ ಹಲವರ ಹೆಸರನ್ನು ಜಯರಾಮ್ ಬಾಯಿಬಿಟ್ಟಿದ್ದಾನೆ. ಜಯರಾಮ್ ಮನೆ ಮೇಲೆ ದಾಳಿ ಆಗುತ್ತಿದ್ದಂತೆ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಪರಾರಿಯಾಗಿದ್ದರು.
ಹಲವು ಅಧಿಕಾರಿಗಳಿಗೆ ರಾಜಕಾರಣಿಗಳಿಗೆ ಕೋಕೊನಟ್ ಹೆಸರಿನಲ್ಲಿ ಜಯರಾಮ್ ಹಣ ಕಳುಹಿಸಿದ್ದ. 15 ವರ್ಷದ ಹಿಂದೆ ಗಾರೆ ಕೆಲಸಕ್ಕೆ ಬಂದಿದ್ದ ಜಯರಾಮ್ ಬೇನಾಮಿಯಿಂದಲೇ ಕೋಟ್ಯಾಧೀಶ್ವರನಾಗಿದ್ದಾನೆ ಎನ್ನಲಾಗುತ್ತಿದೆ. ದಿನೇಶ್ ಕುಮಾರ್ ಗೆ ಬಹಳ ಪರಮಾಪ್ತನಾಗಿದ್ದ ಜಯರಾಮ್ 50-50 ಅನುಪಾತದ ಸೈಟ್ ಹಂಚಿಕೆಯಲ್ಲಿ ನಂ 1 ಫಲಾನುಭವಿಯಾಗಿದ್ದಾನೆ. ಕೇವಲ 50-50 ಸೈಟ್ನಿಂದ ಮಾತ್ರವಲ್ಲದೇ ಬೇನಾಮಿ ಹಣದಿಂದಲೂ ಜಯರಾಮ್ ಈಗ ಶ್ರೀಮಂತನಾಗಿದ್ದಾನೆ.




