ಶಿವಮೊಗ್ಗ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ನ.11 ರಂದು ಬೆಳಗ್ಗೆ 9.30ಕ್ಕೆ ನಗರದ ದುರ್ಗಿಗುಡಿಯಲ್ಲಿರುವ ಸರ್ಕಾರಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಸಹಪಠ್ಯ ಚಟುವಟಿಕೆಗಳಾದ ಭಾವಗೀತೆ, ಆಶುಭಾಷಣ, ಪ್ರಬಂಧ, ಸ್ಥಳದಲ್ಲೇ ಚಿತ್ರ ಬರೆಯುವುದು, ಸ್ಥಳದಲ್ಲೇ ಪಾಠೋಪಕರಣ ತಯಾರಿಕೆ, ಸಾಮಾನ್ಯ ಜ್ಞಾನ ರಸಪ್ರಶ್ನೆ ಹಾಗೂ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಒಬ್ಬ ಶಿಕ್ಷಕರು ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸುವುದು ಹಾಗೂ ಪ್ರಥಮ ಸ್ಥಾನ ಪಡೆದ ಶಿಕ್ಷಕರು ಮಾತ್ರ ಮುಂದಿನ ಹಂತಕ್ಕೆ ಅರ್ಹರಾಗಿರುತ್ತಾರೆ. ಸ್ಪರ್ಧೆಗಳು ಕನ್ನಡ ಮಾಧ್ಯಮದಲ್ಲಿ ನಡೆಸಲಾಗುವುದು. ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಶಿಕ್ಷಕರು ಭಾಗವಹಿಸಬಹುದಾಗಿದೆ. ರಾಜ್ಯ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಿದ್ದ ಶಿಕ್ಷಕರು ಪುನಃ ಅದೇ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ವಿಜೇತರಾದ ಶಿಕ್ಷಕರಿಗೆ ಪ್ರಶಸ್ತಿ ಪತ್ರ ಹಾಗು ನಗದು ಬಹುಮಾನವಿರುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಇವರನ್ನು ಸಂಪರ್ಕಿಸಬಹುದು.




