ಕಾಯಕಯೋಗಿ, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ದಾಸೋಹ ದಿನ ಆಚರಣೆ
ಬೆಂಗಳೂರು: ರಾಜಾಜಿನಗರ ಪ್ರವೇಶ ದ್ವಾರ ಬಳಿ ಡಾ||ಶಿವಕುಮಾರಸ್ವಾಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ರತ್ನ, ಪದ್ಮಭೂಷಣ, ತ್ರಿವಿಧ ದಾಸೋಹಿ ಡಾ||ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 6ನೇ ವರ್ಷದ ಸಂಸ್ಕರಣೋತ್ಸವ ಮತ್ತು ದಾಸೋಹ ದಿನ ಆಚರಣೆ ನಡೆಯಿತು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಡಾ.ಶಿವಕುಮಾರ ಮಹಾಸ್ವಾಮೀಜಿರವರ ಪುತ್ಥಳಿಗೆ ಮೋಟಗಿ ಮಠದ ಪ್ರಭುಚನ್ನಬಸವ ಮಹಾಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯ ಘಟಕ ಅಧ್ಯಕ್ಷ ಡಾ||ಶಂಕರ ಬಿದರಿ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವೀರಶೈವ ಲಿಂಗಾಯಿತ ಮಹಾಸಭಾ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಬಿ.ಆರ್.ನವೀನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಎಂ.ಶಿವಕುಮಾರ್, ಖಜಾಂಚಿ ವಿಜಯಕುಮಾರ್, ಕನ್ನಡ ಪರ ಹೋರಾಟಗಾರ ಪಾಲನೇತ್ರ, ಅಧ್ಯಕ್ಷ ಟಿ.ವೆಂಕಟೇಶ್ ಗೌಡ, ಉಪಾಧ್ಯಕ್ಷ ಕ್ರಾಂತಿರಾಜು, ಸಂಚಾಲಕ ಬಿ.ದೇವರಾಜು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಶಿವರಾಮೇಗೌಡ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು.
ಪ್ರಭುಚನ್ನಬಸವ ಸ್ವಾಮೀಜಿ ಮಾತನಾಡಿ, ಕಾಯಕವೇ ಕೈಲಾಸ ತತ್ವದ ಪ್ರತಿರೂಪ, ಮಹಾನ್ ಮಾನವೀಯತೆ ಗುಣವುಳ್ಳ ಶಿವಕುಮಾರ ಮಹಾಸ್ವಾಮೀಜಿಗಳು ಅನ್ನ, ಶಿಕ್ಷಣ, ಆಶ್ರಯದ ಮಹತ್ವಗಳನ್ನು ಸಾರಿದರು. ಲೋಕಕಲ್ಯಾಣಕ್ಕಾಗಿ ಅವರ ಜೀವನವನ್ನು ಮುಡಿಪಾಗಿಟ್ಟರು ಎಂದರು.
ಶಾಂತಿಯುತ, ಸೌರ್ಹದತೆ, ಸಹೋದರತ್ವ ಮತ್ತು ಜೀವನ ಹೇಗೆ ಸಾಗಿಸಬೇಕು ಎಂದು ನಾಡಿನ ಜನರಿಗೆ ಅರಿವು ಮೂಡಿಸಿದ ಮಹಾನ್ ಸಂತ, ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳ ಆದರ್ಶಗುಣಗಳನ್ನು ಆಳವಡಿಸಿಕೊಂಡು ಎಲ್ಲರು ಜೀವನ ಸಾಗಿಸಿದರೆ ಸಾಕು ಎಂದರು.
ಶಂಕರ ಬಿದರಿ ಮಾತನಾಡಿ, ಅಚಾರ, ವಿಚಾರ ಸಿದ್ಧಾಂತಗಳು ಮೂಲಕ ವಿಶ್ವದ ಗಮನ ಸೆಳದ ಡಾ.ಶಿವಕುಮಾರ ಮಹಾಸ್ವಾಮೀಜಿರವರ ಆದರ್ಶ ತತ್ವಗಳಿಂದ ನಾಡಿನಲ್ಲಿ ಶಾಂತಿ ಲಭಿಸಲಿ. ಡಾ.ಶಿವಕುಮಾರ ಮಹಾಸ್ವಾಮೀಜಿ ಸಾಧನೆ ಮಾಡಿ ಮಹಾನ್ ಸಂತರಾಗಿ ಪರಮಾತ್ಮನ ಬಳಿ ಲೀನವಾದರು ಎಂದರು.
ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಶಿವಕುಮಾರ ಸ್ವಾಮೀಜಿರವರು ಸಮಾಜಕ್ಕೆ ಕೊಟ್ಟ ಕೊಡುಗೆ ಸದಾ ನಾವು ಸ್ಮರಿಸಬೇಕು, ಎಲ್ಲರಿಗೂ ಮೀರಿದ ಕಾರ್ಯ ಮಾಡಿದರು. ಸಮಾಜಕ್ಕೆ ಅನ್ನ, ಅಕ್ಷರ, ಆಶ್ರಯವನ್ನು ಕೋಟ್ಯಂತರ ಜನರಿಗೆ ನೀಡಿದರು, ಸಿದ್ದಗಂಗಾ ಮಠದಲ್ಲಿ ಶಿಕ್ಷಣ ಪಡೆದವರು ಇಂದು ದೇಶ, ವಿದೇಶದಲ್ಲಿ ಉತ್ತಮ,ಉನ್ನತ ಕೆಲಸದಲ್ಲಿ ಇದ್ದಾರೆ. ಉತ್ತಮ ಸಮಾಜಕ್ಕೆ ಬದುಕು ಕಲ್ಯಾಣವಾಗಲು ಶಿವಕುಮಾರ ಸ್ವಾಮೀಜಿರವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಎಲ್ಲರು ಸಾಗಬೇಕು ಎಂದರು.




