ಬೆಂಗಳೂರು: ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯ ತೊಡೆದುಹಾಕಲು ಸಂಕಲ್ಪ ಮಾಡಿರುವ ರಾಜ್ಯ ಸರ್ಕಾರ ಇದಕ್ಕಾಗಿ ವಿಶೇಷ ಕಾನೂನು ಜಾರಿಗೆ ತರಲು ಮುಂದಾಗಿದೆ. ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯ ಇರಲೇಬಾರದು ಎಂದು ಪ್ರತಿಪಾದಿಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿಗೆ ತರುವಂತೆ ಸಲಹೆ ಮಾಡಿದ್ದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ ಯಾವುದೇ ವಿದ್ಯಾರ್ಥಿ ತಾರತಮ್ಯ ಎದುರಿಸಬಾರದು ಎನ್ನುವುದನ್ನು ಖಾತ್ರಿ ಪಡಿಸಲು ಕಾಯ್ದೆ ಜಾರಿಗೊಳಿಸುವ ಸಂಕಲ್ಪಕ್ಕೆ ಸರ್ಕಾರ ಬದ್ಧ ಮತ್ತು ದೃಢ ಎಂದಿದ್ದಾರೆ.
ರೋಹಿತ್, ಪಾಯಲ್, ದರ್ಶನ್ ಮತ್ತು ಘನತೆಗೆ ಅರ್ಹರಾದ ಅಸಂಖ್ಯಾತರ ಕನಸುಗಳನ್ನು ಗೌರವಿಸಲು ಕಾನೂನನ್ನು ಆದಷ್ಟು ಶೀಘ್ರ ಸಿದ್ಧಪಡಿಸಲಾಗುವುದು. ಬಿ.ಆರ್. ಅಂಬೇಡ್ಕರ್ ಅವರ ಸಮಾನ, ಸಹಾನುಭೂತಿಯ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವತ್ತ ದಿಟ್ಟ ಹೆಜ್ಜೆ ಇಡಲಾಗುವುದು. ಆದಷ್ಟು ಬೇಗ ಈ ಕಾನೂನನ್ನು ಜಾರಿಗೆ ತರಲಾಗುವುದು ಎಂದಿದ್ದಾರೆ.
ಬಿ.ಆರ್. ಅಂಬೇಡ್ಕರ್ ತಮ್ಮ ಜೀವಿತಾವಧಿಯಲ್ಲಿ ಎದುರಿಸಿದ್ದ ತಾರತಮ್ಯಕ್ಕೆ ಸಂಬಂಧಿಸಿದ ಹಲವು ಘಟನೆಗಳನ್ನು ರಾಹುಲ್ ಗಾಂಧಿ ಪತ್ರದಲ್ಲಿ ವಿವರಿಸಿದ್ದು, ಈ ಪತ್ರವನ್ನು ಅವರು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ.



