ಎನ್.ಡಿ.ಆರ್.ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಂದಿನ ವರೆಗೆ 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಇದಲ್ಲದೆ, ಹಲವು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೆ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಧನ ವಿತರಿಸಲು ಮತ್ತು 2 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ವಿತರಿಸಲು ತೀರ್ಮಾನಿಸಲಾಗಿದೆ. ಸಣ್ಣ ಮತ್ತು ಅತಿಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯದ ನಷ್ಟಕ್ಕೆ ಪರಿಹಾರವಾಗಿ ತಲಾ 3,000 ರೂ. ಪರಿಹಾರ ನೀಡಲೂ ಸಹ ತೀರ್ಮಾನಿಸಲಾಗಿದೆ.

ನೀರು ಮತ್ತು ಮೇವಿನ ನಿರ್ವಹಣೆಗಾಗಿ ಇಲ್ಲಿಯವರೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ 202 ಸಭೆಗಳನ್ನು ನಡೆಸಿದೆ ಹಾಗೂ 462 ತಾಲೂಕು ಮಟ್ಟದ ಟಾಸ್ಕ್ಪೋರ್ಸ್ ಸಭೆಗಳನ್ನು ನಡೆಸಿದೆ. ನೀರಿನ ಸಮಸ್ಯೆಯಿರುವ 270 ಗ್ರಾಮಗಳಿಗೆ ಟ್ಯಾಂಕರ್ ಮುಖಾಂತರ ಮತ್ತು 594 ಗ್ರಾಮಗಳಿಗೆ ಖಾಸಗಿ ಬೋರ್ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ. 153 ನಗರ ಪ್ರದೇಶದ ವಾರ್ಡ್ಗಳಿಗೆ ಟ್ಯಾಂಕರ್ ಮೂಲಕ ಮತ್ತು 35 ವಾರ್ಡ್ಗಳಿಗೆ ಖಾಸಗಿ ಬೋರ್ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ.
ರಾಜ್ಯದ ಅವಶ್ಯಕತೆಯಿರುವ ವಿವಿಧ ಭಾಗಗಳಲ್ಲಿ 47 ಮೇವಿನ ಬ್ಯಾಂಕ್ಗಳನ್ನು ಮತ್ತು 28 ಕಡೆಗಳಲ್ಲಿ ಗೋಶಾಲೆಗಳನ್ನು ತೆರೆದು ಮೇವಿನ ಕೊರತೆ ನೀಗಿಸಲಾಗುತ್ತಿದೆ. ಈ ವೆಚ್ಚವನ್ನು ಭರಿಸಲು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಗಳ ಖಾತೆಗಳಲ್ಲಿ ರೂ. 836 ಕೋಟಿ ಅನುದಾನ ಲಭ್ಯವಿದೆ.
– ಸಿದ್ದರಾಮಯ್ಯ, ಸಿಎಂ



