ಬೆಂಗಳೂರು: ಲೋಕಸಭೆ ಚುನಾವಣೆ ಮತದಾನ ನಡೆಯುತ್ತಿರುವ ಸಮಯದಲ್ಲೇ ತನ್ನ ಆಪ್ತನ ಮನೆಯಲ್ಲಿ 4.8 ಕೋಟಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಚಿಕ್ಕಬಳ್ಳಾಪುರದ ಫ್ಲೈಯಿಂಗ್ ಸ್ಕ್ವಾಡ್ ತಂಡ (ಎಫ್ಎಸ್ಟಿ) ಕ್ರಮ ಕೈಗೊಂಡಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ. 4.8 ಕೋಟಿ ರೂ. ಮೌಲ್ಯದ ನಗದನ್ನು ಚಿಕ್ಕಬಳ್ಳಾಪುರದ ಎಫ್ಎಸ್ಟಿ ವಶಪಡಿಸಿಕೊಂಡಿರುವುದಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದ ರಾಜ್ಯ ಕಣ್ಗಾವಲು ತಂಡ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್ ವಿರುದ್ಧ ಏಪ್ರಿಲ್ 25ರಂದು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ.
ಮತದಾರರಿಗೆ ಆಮಿಷ ಮತ್ತು ಅನಗತ್ಯ ಪ್ರಭಾವ ಆರೋಪದ ಮೇರೆಗೆ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಐಪಿಸಿ ಸಂಬಂಧಿತ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಯೋಗ ಪೋಸ್ಟ್ ಮಾಡಿದೆ.




