ಪೊಲೀಸ್ ಕಮೀಷನರ್ ಅಗ್ರವಾಲ್ ವಿರುದ್ಧ ದೂರು, ವರ್ಗಾವಣೆಗೆ ಆಗ್ರಹ
ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ನಿಯೋಗದಿಂದ ಗೃಹ ಸಚಿವರ ಭೇಟಿ
ಮಂಗಳೂರು: ಸಿಪಿಐಎಂ ಪಕ್ಷದ ದ.ಕ. ಜಿಲ್ಲಾ ಸಮಿತಿಯ ನಿಯೋಗ ಮಂಗಳೂರು ಪ್ರವಾಸದಲ್ಲಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮಂಗಳೂರು ಪೊಲೀಸ್ ಕಮೀಷನರ್ ವಿರುದ್ಧ ಲಿಖಿತ ದೂರು ನೀಡಿತು. ಶಿಸ್ತು ಕ್ರಮ ಕೈಗೊಂಡು ವರ್ಗಾಯಿಸುವಂತೆ ಆಗ್ರಹಿಸಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಜನಪರ ಸಂಘಟನೆಗಳು ನಡೆಸುವ ಪ್ರತಿಭಟನೆ, ಧರಣಿಗಳಿಗೆ ವಿನಾಕಾರಣ ಅನುಮತಿ ನಿರಾಕರಿಸುವುದು, ಪ್ರತಿಭಟನಾಕಾರರ ಮೇಲೆ ಸುಳ್ಳು ಮೊಕದ್ದಮೆಗಳನ್ನು ಹೂಡುತ್ತಿರುವುದು ಮಂಗಳೂರಿನಲ್ಲಿ ಜನಾಕ್ರೋಶಕ್ಕೆ ಕಾರಣವಾಗಿದೆ. ಸಿಪಿಐಎಂ ಪಕ್ಷ ಕಮೀಷನರ್ ಅನುಪಮ್ ಅಗ್ರವಾಲ್, ಡಿಸಿಪಿ ಸಿದ್ದಾರ್ಥ ಗೋಯಲ್ ರ ಸರ್ವಾಧಿಕಾರಿ ಧೋರಣೆಯ ವಿರುದ್ಧ ಸರಣಿ ಪ್ರತಿಭಟನೆಗೆ ಕರೆ ನೀಡಿದ್ದು, ವರ್ಗಾವಣೆಗೆ ಪಟ್ಟು ಹಿಡಿದಿದೆ. ಅದರ ಭಾಗವಾಗಿ ಇಂದು ಸಿಪಿಐಎಂ ಜಿಲ್ಲಾ ಸಮಿತಿ ನಿಯೋಗ ಗೃಹ ಸಚಿವರನ್ನು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿತು.
ಮನವಿ ಸಲ್ಲಿಸುವ ಸಂದರ್ಭ, ಕಮೀಷನರ್ ಅಗ್ರವಾಲ್ ಪ್ರತಿಭಟನೆ, ಧರಣಿಗಳನ್ನು ವಿನಾ ಕಾರಣ ನಿರ್ಬಂಧಿಸಿರುವ, ಪ್ರತಿಭಟನಾಕಾರರ ಮೇಲೆ ಸುಳ್ಳು ಮೊಕದ್ದಮೆ ಹೂಡಿರುವ ವಿವರಗಳ ಜೊತೆಗೆ, ಕೋಮುವಾದಿ ಶಕ್ತಿಗಳ ಪರವಾಗಿ ಕಾರ್ಯನಿರ್ವಸುವ ಅವರ ನಡೆಯನ್ನು ಹಲವು ನಿದರ್ಶನಗಳ ಮೂಲಕ ಗೃಹ ಸಚಿವರ ಮುಂದೆ ಮಂಡಿಸಿತು. ಬಿಜೆಪಿ ಮುಖಂಡರು, ಜನಪ್ರತಿನಿಧಿಗಳಿಗೆ ರಸ್ತೆ ಮುಚ್ಚಿ ದಿನಗಟ್ಟಲೆ ಕಾರ್ಯಕ್ರಮ ನಡೆಸಲು ಅನುವು ನೀಡುವ, ಮತೀಯ ಕ್ರಿಮಿನಲ್ ಗಳು, ಮತೀಯ ದ್ವೇಷದ ಕೊಲೆ ಆರೋಪಿಗಳು ಪೊಲೀಸರ ಜೊತೆಯಾಗಿ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿರುವ ಘಟನೆಗಳನ್ನೂ ಗೃಹ ಸಚಿವರ ಗಮನಕ್ಕೆ ನಿಯೋಗ ತಂದಿತು.
ಕಮೀಷನರ್ ಅನುಪಮ್ ಅಗ್ರವಾಲ್ ರ ಅಕ್ರಮಗಳು, ಸರ್ವಾಧಿಕಾರಿ ನಡೆ, ಭ್ರಷ್ಟಾಚಾರ, ಕೋಮು ಶಕ್ತಿಗಳೊಂದಿಗಿನ ಒಡನಾಟದ ಕುರಿತು ಇಲಾಖಾ ತನಿಖೆ ನಡೆಸುವಂತೆ, ತಕ್ಷಣದಿಂದಲೇ ಅವರನ್ನು ಮಂಗಳೂರಿನಿಂದ ವರ್ಗಾಯಿಸುವಂತೆ ಅಗ್ರಹಿಸಿತು.
ನಿಯೋಗದಲ್ಲಿ ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕೆ ಯಾದವ ಶೆಟ್ಟಿ, ವಸಂತ ಆಚಾರಿ, ಸುನಿಲ್ ಕುಮಾರ್ ಬಜಾಲ್, ಮಂಗಳೂರು ನಗರ ಸಮಿತಿ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಉಪಸ್ಥಿತರಿದ್ದರು.




