ಬೆಂಗಳೂರು: ವಕ್ಫ್ ಆಸ್ತಿಗಳ ಬಗ್ಗೆ ತಪ್ಪು ಮಾಹಿತಿ ಹರಡುವ ಮೂಲಕ ಇಸ್ಲಾಂ ಮತ್ತು ಮುಸ್ಲಿಮರ ಮಾನಹಾನಿ ಹಾಗೂ ಕೋಮುದ್ವೇಷಕ್ಕೆ ಪ್ರಚೋದನೆ ನೀಡುತ್ತಿರುವ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮತ್ತು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಿದಾಯತ್ ಉಲ್ಲಾಖಾನ್, ಶಿವಾಜಿನಗರದ ಉಪಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಪ್ರಚೋದನೆ ನೀಡಿದ ಆರೋಪದಲ್ಲಿ ಈ ಇಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮತ್ತು ಚಕ್ರವರ್ತಿ ಸೂಲಿಬೆಲೆ ಅವರು ಅಕ್ಟೋಬರ್ 15ರಂದು ವಿಜಯಪುರದಲ್ಲಿ ಅವಹೇಳನಕಾರಿ ಭಾಷೆ ಬಳಸಿ ಮಾತನಾಡಿದ್ದು, ವಕ್ಫ್ ಆಸ್ತಿಗಳ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಅವರ ಭಾಷಣಗಳು ಇಸ್ಲಾಂ ಮತ್ತು ಅದರ ಅನುಯಾಯಿಗಳನ್ನು ನಿಂದಿಸುವಂತಿದ್ದು, ಭಯವನ್ನು ಹುಟ್ಟುಹಾಕುವಂತಿದೆ. ದ್ವೇಷವನ್ನು ಪ್ರಚೋದಿಸುವ ಮತ್ತು ಸಮಾಜದಲ್ಲಿ ಕೋಮು ಅಶಾಂತಿಯನ್ನು ಉಂಟುಮಾಡುವ ಸಂಘಟಿತ ಪ್ರಯತ್ನವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.



