ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ವತಿಯಿಂದ ದಿನಾಂಕ:10.10.2024 ರಂದು ಬೆಳಗ್ಗೆ 11.00 ಗಂಟೆಗೆ ಬಾಪೂಜಿ ಸಭಾಂಗಣ, ಸರ್ಕಾರಿ ಕಲಾ ಕಾಲೇಜು, ಅಂಬೇಡ್ಕರ್ ವೀದಿ, ಸೆಂಟ್ರಲ್ ಕಾಲೇಜು ಎದುರು, ಬೆಂಗಳೂರು ಇಲ್ಲಿ ಬಂಜಾರ ಸಾಂಪ್ರದಾಯಿಕ ಕಸೂತಿ ಕಲಿಕೆ ಕಾರ್ಯಾಗಾರದ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಎ. ಆರ್. ಗೋವಿಂದಸ್ವಾಮಿ ಸಮಾರೋಪ ಸಮಾರಂಭದ ನುಡಿ ನುಡಿಯಲಿದ್ದಾರೆ. ಡಾ. ಪಿ.ಟಿ. ಶ್ರೀನಿವಾಸ ನಾಯಕ, ಪ್ರಾಂಶುಪಾಲರು, ಸರ್ಕಾರಿ ಕಲಾ ಕಾಲೇಜು, ಬೆಂಗಳೂರು ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎನ್. ಜಯದೇವ ನಾಯಕ್, ಅಧ್ಯಕ್ಷರು, ತಾಂಡಾ ಅಭಿವೃದ್ಧಿ ನಿಗಮ, ಬೆಂಗಳೂರು, ಸೈದುಲು ಅಡಾವತ್ ಭಾ.ಪೋ.ಸೇ , ಉಪ ಪೋಲಿಸ್ ಆಯುಕ್ತರು, ಬೆಂಗಳೂರು ಉತ್ತರ, ಶ್ರೀಮತಿ ಕಾಂತಾ ನಾಯಕ್ , ಅಧ್ಯಕ್ಷರು, ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು, ಶ್ರೀ ಕೆ ಬಲರಾಮ, ಕ.ವಿ.ಪ್ರ.ನಿ. ನಿ. ನೌಕರ ಸಂಘ(659), ಬೆಂಗಳೂರು, ವಿ. ನಾಗೇಂದ್ರ ಪ್ರಸಾದ್, ಹೆಸರಾಂತ ಗೀತ ರಚನಾಕಾರರು ಹಾಗೂ ನಿರ್ದೇಶಕರು ಹಾಗೂ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.




