ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಈ ಪ್ರದೇಶದಲ್ಲಿ ತಾವು ಸಮೀಕ್ಷೆ ನಡೆಸಿ ಸಂತ್ರಸ್ತ ಜನರಿಗೆ ಧೈರ್ಯ ತುಂಬುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಹಿರಿಯ ನಾಯಕ ದೇವೇಗೌಡ ಹೇಳಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಜನರ ಅಹವಾಲು ಕೇಳುವುದು ನಾಯಕರ ಕರ್ತವ್ಯವಾಗಬೇಕು. ಹೀಗಾಗಿ ಸಮೀಕ್ಷೆ ನಡೆಸಿ ಹಾನಿಯ ಬಗ್ಗೆ ಅಂದಾಜು ವರದಿ ತಯಾರಿಸಿ ಪ್ರಧಾನಿಗೆ ಸಲ್ಲಿಸುತ್ತೇನೆ. ಆ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿ ಹೆಚ್ಚಿನ ಪರಿಹಾರ ಮಾಡುವಂತೆ ಮನವಿ ಮಾಡುತ್ತೇನೆ ಎಂದರು.
ನೆರೆ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಆದರೆ ಯಾವೆಲ್ಲಾ ಪರಿಹಾರ ಕೈಗೊಂಡಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ. 48 ಗಂಟೆಗಳಲ್ಲಿ ಆ ಮಾಹಿತಿ ಬಹಿರಂಗಪಡಿಸಬೇಕು ಎಂದರು.
ಮೂರು ಅಥವಾ ನಾಲ್ಕು ದಿನಗಳ ನಂತರ ನಾನೂ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಸಾಧ್ಯವಿರುವ ಕಡೆಯಲ್ಲಿ ರಸ್ತೆ ಮೂಲಕವೇ ಪ್ರವಾಸ ಕೈಗೊಳ್ಳುತ್ತೇನೆ. ನಷ್ಟದ ಪ್ರಮಾಣ, ಪರಿಹಾರ ಸಿಕ್ಕಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ವರದಿ ಸಿದ್ಧಪಡಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಲ್ಲಿಸುತ್ತೇನೆ ಎಂದರು.
ಕೇಂದ್ರ ಸರ್ಕಾರ ನೆರೆ ಪೀಡಿತ ಇತರ ರಾಜ್ಯಗಳಿಗೆ ಪರಿಹಾರ ಘೋಷಿಸಿದೆ. ಕರ್ನಾಟಕಕ್ಕೆ ಘೋಷಿಸಿಲ್ಲ. ಈ ಬಗ್ಗೆ ಪ್ರಧಾನಿ ಅವರ ಬಳಿ ಮಾತನಾಡುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಬಗ್ಗೆ ರಾಜಕೀಯ ಮಾತನಾಡಲು ಬಯಸುವುದಿಲ್ಲ’ ಎಂದರು.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಖರ್ಚು ಮಾಡುತ್ತಿರುವ ಕಾರಣ, ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಘೋಷಿಸಲು ಹಣವಿಲ್ಲ ಎಂದು ಆ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ ಎಂದರು.
ಜೆಡಿಎಸ್ ರಾಷ್ಟ್ರೀಯ ಮಟ್ಟದಲ್ಲಿ ಎನ್ ಡಿ ಎ ಮೈತ್ರಿಕೂಟದ ಭಾಗವಾಗಿದೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಈ ಮೈತ್ರಿ ಅಬಾಧಿತ. ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮುಂದುವರೆಯಲಿದೆ ಎಂದರು.
ರಾಜ್ಯದಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಯುವ ನಾಯಕ ನಿಖಿಲ್ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸದಸ್ಯತ್ವ ನೋಂದಣಿ ಆಂದೋಲನ ನಡೆಸಿರುವುದು ಸಂಪೂರ್ಣ ಯಶಸ್ವಿಯಾಗಿದೆ ಎಂದರು.
ಪಕ್ಷದಲ್ಲಿ ಹೊಸ ಉತ್ಸಾಹ ಮೂಡಿಸುವ ಜೊತೆಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ತಯಾರಿ ನಡೆಸುವ ದೃಷ್ಟಿಯಿಂದ ಅಕ್ಟೋಬರ್ 12ರಂದು ಬೆಂಗಳೂರಿನಲ್ಲಿ ಜೆಡಿಎಸ್ ಮಹಿಳಾ ಸಮಾವೇಶ ಆಯೋಜಿಸಲಾಗಿದೆ ಎಂದರು.
ಪಕ್ಷದ ಮಹಿಳಾ ಘಕಟದ ವತಿಯಿಂದ ನಡೆಸುತ್ತಿರುವ ಈ ಸಮಾವೇಶದಲ್ಲಿ 50,000ದಿಂದ 60,000 ಜನರನ್ನು ಸೇರಿಸಲಾಗುತ್ತದೆ. ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗೆ ನಡೆಯಲಿರುವ ಚುನಾವಣೆಗೆ ಇದರಿಂದ ನೆರವಾಗಲಿದೆ. ಜಿಬಿಎಗೆ ನಡೆಯಲಿರುವ ಚುನಾವಣೆಯಲ್ಲಿ ನಮ್ಮ ಪಕ್ಷ 50-60 ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಳ್ಳಲಾಗಿದೆ ಎಂದರು.




