ಬೆಂಗಳೂರು: ದೇಶದಲ್ಲಿ ದಲಿತರನ್ನು ಕಾಂಗ್ರೆಸ್ ಸಹಿಸಿಕೊಳ್ಳುವುದಿಲ್ಲ, ಒಪ್ಪುವುದಿಲ್ಲ ಎನ್ನುವುದು ಅಂಬೇಡ್ಕರ್ ಅವರ ಕಾಲಘಟ್ಟದಿಂದಲೂ ಸಾಬೀತು ಆಗುತ್ತಲೇ ಇದೆ ಎಂದು ರಾಜ್ಯ ಬಿಜೆಪಿ ಹೇಳಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕಾರ್ಯಕ್ರಮ ಒಂದರಲ್ಲಿ ತೆಲಂಗಾಣ ಡಿಸಿಎಂ ಮಲ್ಲು ಬಟ್ಟಿ ವಿಕ್ರಾಮಾರ್ಕ ಅವರಿಗೆ ಸಮಾನವಾದ ಕುರ್ಚಿ ಇಲ್ಲದ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ, ತೆಲಂಗಾಣ ಸರ್ಕಾರದ ದಲಿತ ಉಪಮುಖ್ಯಮಂತ್ರಿ ಮಲ್ಲು ಬಟ್ಟಿ ವಿಕ್ರಾಮಾರ್ಕ ಅವರಿಗೆ ಭಾರೀ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದೆ.
ಸಿಎಂ ರೇವಂತ್ ರೆಡ್ಡಿ ಅವರಿಂದ ಹಿಡಿದು ಇಡೀ ಸಚಿವ ಸಂಪುಟವೇ ಕುರ್ಚಿ ಮೇಲೆ ವಿರಾಜಮಾನರಾಗಿ ಕುಳಿತಿದ್ದರೆ, ಡಿಸಿಎಂ ದಲಿತರು ಎನ್ನುವ ಕಾರಣಕ್ಕೆ ಕೆಳಗೆ ಕೂರಿಸಲಾಗಿದೆ. ದೇಶದ ಮೂಲೆ ಮೂಲೆಯಲ್ಲೂ ದಲಿತರನ್ನು ಹತ್ತಿಕ್ಕುವ ಅಜೆಂಡಾವನ್ನು ಕಾಂಗ್ರೆಸ್ ಮುಂದುವರಿಸಿದೆ ಎಂದು ಹೇಳಿದೆ.




