ಬೆಂಗಳೂರು: ದೇಶದಲ್ಲಿ ದಲಿತರನ್ನು ಕಾಂಗ್ರೆಸ್ ಸಹಿಸಿಕೊಳ್ಳುವುದಿಲ್ಲ, ಒಪ್ಪುವುದಿಲ್ಲ ಎನ್ನುವುದು ಅಂಬೇಡ್ಕರ್ ಅವರ ಕಾಲಘಟ್ಟದಿಂದಲೂ ಸಾಬೀತು ಆಗುತ್ತಲೇ ಇದೆ ಎಂದು ರಾಜ್ಯ ಬಿಜೆಪಿ ಹೇಳಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕಾರ್ಯಕ್ರಮ ಒಂದರಲ್ಲಿ ತೆಲಂಗಾಣ ಡಿಸಿಎಂ ಮಲ್ಲು ಬಟ್ಟಿ ವಿಕ್ರಾಮಾರ್ಕ ಅವರಿಗೆ ಸಮಾನವಾದ ಕುರ್ಚಿ ಇಲ್ಲದ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ, ತೆಲಂಗಾಣ ಸರ್ಕಾರದ ದಲಿತ ಉಪಮುಖ್ಯಮಂತ್ರಿ ಮಲ್ಲು ಬಟ್ಟಿ ವಿಕ್ರಾಮಾರ್ಕ ಅವರಿಗೆ ಭಾರೀ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದೆ.
ಸಿಎಂ ರೇವಂತ್ ರೆಡ್ಡಿ ಅವರಿಂದ ಹಿಡಿದು ಇಡೀ ಸಚಿವ ಸಂಪುಟವೇ ಕುರ್ಚಿ ಮೇಲೆ ವಿರಾಜಮಾನರಾಗಿ ಕುಳಿತಿದ್ದರೆ, ಡಿಸಿಎಂ ದಲಿತರು ಎನ್ನುವ ಕಾರಣಕ್ಕೆ ಕೆಳಗೆ ಕೂರಿಸಲಾಗಿದೆ. ದೇಶದ ಮೂಲೆ ಮೂಲೆಯಲ್ಲೂ ದಲಿತರನ್ನು ಹತ್ತಿಕ್ಕುವ ಅಜೆಂಡಾವನ್ನು ಕಾಂಗ್ರೆಸ್ ಮುಂದುವರಿಸಿದೆ ಎಂದು ಹೇಳಿದೆ.




