ಸನ್ಮಾನ್ಯ ಶ್ರೀ @kharge ಅವರೇ, ಸಾಧನೆಗಳಿದ್ದರೆ ತಾನೆ ವರದಿ ಕೊಡೋದಕ್ಕೆ.
ಪಾಪ ತಾವು ರಾಜ್ಯದಲ್ಲಿ ಅಧಿಕಾರ ತ್ಯಾಗ ಮಾಡಿ ದೇಶಾದ್ಯಂತ ಕಾಂಗ್ರೆಸ್ ಪಕ್ಷ ಕಟ್ಟಲು ಶ್ರಮ ಪಡುತ್ತಿದ್ದೀರಿ. ಹಾಗಾಗಿ ಕರ್ನಾಟಕದಲ್ಲಿ @INCKarnataka ಸರ್ಕಾರ ಏನು ಮಾಡುತ್ತಿದೆ, ರಾಜ್ಯದಲ್ಲಿ ತಮ್ಮ ಪಕ್ಷದ ಗೋಳೇನು ಎನ್ನುವ ಬಗ್ಗೆ ತಮಗೆ ಬಹುಶಃ ಮಾಹಿತಿ ಇಲ್ಲ ಎಂದು ಕಾಣುತ್ತದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನಾನು ಈಗಾಗಲೇ ಹಲವು ಬಾರಿ ಹೇಳಿರುವಂತೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕೇವಲ “ಗುರುವಾರದ ಸರ್ಕಾರ”. ಗುರುವಾರದಂದು ಸಂಪುಟ ಸಭೆ ನಡೆಯುವ ದಿನ ಮಾತ್ರ ಮುಖ್ಯಮಂತ್ರಿಗಳು, ಬಹುತೇಕ ಸಚಿವರು, ಅಧಿಕಾರಿಗಳು ವಿಧಾನಸೌಧದಲ್ಲಿ, ವಿಕಾಸಸೌಧದಲ್ಲಿ ಕಾಣಿಸಿಕೊಳ್ಳುತ್ತಾರೆ. ಇನ್ನು ಬಾಕಿ ದಿನ ಎಲ್ಲರೂ ತಮ್ಮದೇ ಲೋಕದಲ್ಲಿ ಇರುತ್ತಾರೆ, ತಮ್ಮದೇ ರಾಜಕೀಯ ಲೆಕ್ಕಾಚಾರದಲ್ಲಿ ಮುಳುಗಿರುತ್ತಾರೆ.
ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿಗಳಿಗೆ ಕಾನೂನು ಹೋರಾಟ, ಕುರ್ಚಿ ಉಳಿಸಿಕೊಳ್ಳುವ ಚಿಂತೆ. ಮುಖ್ಯಮಂತ್ರಿ ಆಗಲು ತುದಿಗಾಲಲ್ಲಿ ನಿಂತಿರುವ ಡಿಸಿಎಂ ಸಾಹೇಬರಿಗೆ ಹಗಲು, ರಾತ್ರಿ ಅದೇ ಕನಸು. ಇನ್ನು ಉಳಿದ ಕೆಲವರಿಗೆ ಇಬ್ಬರ ಜಗಳದಲ್ಲಿ ಮೂರನೆಯವರಿಗೆ ಏನಾದರೂ ಲಾಭವಿದೆಯೇ ಎನ್ನುವ ಆಸೆ. ಇನ್ನು ಹಿರಿಯ ಶಾಸಕರಿಗೆ ಸಂಪುಟ ಪುನಾರಚನೆಯಲ್ಲಿ ಒಂದು ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವ ಚಿಂತೆ.
ಇನ್ನು ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ತಮಗೆ ತಿಳಿದೇ ಇದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಬಳಿ “ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕೋದಕ್ಕೂ ದುಡ್ಡಿಲ್ಲ” ಅಂತ ತಾವೇ ಹೇಳಿದ್ದೀರಿ.
ಪರಿಸ್ಥಿತಿ ಹೀಗಿರುವಾಗ ಆಡಳಿತ ಹಳಿ ತಪ್ಪದೇ ಇರುತ್ತದೆಯೇ? ಪಾಪ ಕಾಂಗ್ರೆಸ್ ಸಚಿವರು ಏನಾದರೂ ಸಾಧನೆ ಮಾಡಿದ್ದರೆ ತಾನೇ ತಮಗೆ ವರದಿ ಕೊಡೋಕೆ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




