ಬೆಂಗಳೂರು: ಮಹಿಳೆಯರಿಗೆ ಪ್ರತಿ ತಿಂಗಳು ನೀಡಬೇಕಾಗಿದ್ದ ಎರಡು ಸಾವಿರ ರೂ. ಗೃಹಲಕ್ಷ್ಮಿ ಹಣವನ್ನು ಕಳೆದ ಮೂರು ತಿಂಗಳಿಂದ ನೀಡಲಾಗದೇ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ ಎಂದು ಜೆಡಿಎಸ್ ಆರೋಪಿಸಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಎಕ್ಸ್ ತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ಫ್ರೀ ಫ್ರೀ ಫ್ರೀ ಎಂದು ಬೊಗಳೆ ಬಿಟ್ಟು ಅಧಿಕಾರಕ್ಕೇರಿದ ಕಾಂಗ್ರೆಸ್, ವಚನ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ಮತದಾರರಿಗೆ ಮಹಾದ್ರೋಹ ಎಸಗಿದೆ. ದಿವಾಳಿಯತ್ತ ಕಾಂಗ್ರೆಸ್ ಸರ್ಕಾರ ಮುಖಮಾಡಿದೆ ಎಂದಿದೆ.
ಪ್ರತಿ ತಿಂಗಳೂ ತಾಂತ್ರಿಕ ಸಮಸ್ಯೆ ಎನ್ನುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ, ಸದ್ದಿಲ್ಲದೆ ರಾಜ್ಯದಲ್ಲಿ ಎರಡು ಲಕ್ಷ ಮಹಿಳೆಯರಿಗೆ 2,000 ರೂ. ಗೃಹಲಕ್ಷ್ಮಿ ಹಣ ಸ್ಥಗಿತಗೊಳಿಸಿದ್ದೀರಿ. ನಿಮ್ಮದು ವಚನಭ್ರಷ್ಟ ಸರ್ಕಾರ ಅಲ್ಲವೇ ಎಂದು ಕೇಳಿದೆ.
ಗೃಹಲಕ್ಷ್ಮಿ ಹಣಕ್ಕೆ 3 ತಿಂಗಳಿಂದ ತಾಂತ್ರಿಕ ಸಮಸ್ಯೆ, ಈಗ ರಾಜ್ಯದಲ್ಲಿ 2 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಸ್ಥಗಿತ, ಕಾಂಗ್ರೆಸ್ ಯೋಗ್ಯತೆಗೆ ಪೂರ್ತಿ 10 ಕೆಜಿ ಅಕ್ಕಿ ಕೊಡಲು ಸಾಧ್ಯವೇ ಆಗಿಲ್ಲ. ಈಗ 20 ಲಕ್ಷ ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದೀರಿ. 200 ಯೂನಿಟ್ ಉಚಿತ ವಿದ್ಯುತ್ ಯಾರಿಗೂ ಸಿಗುತ್ತಿಲ್ಲ. ಯುವ ನಿಧಿ ಯಾರಿಗೂ ಸಿಕ್ಕಿಲ್ಲ, ಸಿಗುವುದು ಇಲ್ಲ ಇದು ಮಾತ್ರ ಗ್ಯಾರಂಟಿ ಎಂದಿದೆ.




