ಕಾಂಗ್ರೆಸ್ ಸರ್ಕಾರದಿಂದ ವಿಪಕ್ಷ ಶಾಸಕರನ್ನು ಹತ್ತಿಕ್ಕುವ ಪ್ರಯತ್ನ!
ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಅವನ ತಾಯಿ ವಿಜಯಲಕ್ಷ್ಮೀ ಅವರು “ನಾನು ಬೈರತಿ ಬಸವರಾಜ್ ವಿರುದ್ಧ ದೂರು ಕೊಟ್ಟಿಲ್ಲ, ಪೊಲೀಸರೇ ಹೆಸರು ಹಾಕಿಕೊಂಡಿದ್ದಾರೆ” ಎಂದು ಹೇಳಿರುವುದು ಕಾಂಗ್ರೆಸ್ ಸರ್ಕಾರ ಈ ಪ್ರಕರಣದಲ್ಲಿ ಯಾವ ಕೀಳು ಮಟ್ಟಕ್ಕೆ ಇಳಿದು ರಾಜಕೀಯ ದ್ವೇಷ ಸಾಧಿಸುತ್ತಿದೆ ಎನ್ನುವುದನ್ನ ಸಾಬೀತುಪಡಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮಾತೆತ್ತಿದರೆ ಸಿಬಿಐ, ಐಟಿ, ಇಡಿ ಮೂಲಕ ಕೇಂದ್ರ ಸರ್ಕಾರ ವಿಪಕ್ಷಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಅಪಪ್ರಚಾರ ಮಾಡುವ @INCKarnataka ನಾಯಕರು, ದೂರಿನಲ್ಲಿ ಶಾಸಕರ ಹೆಸರೇ ಇಲ್ಲದಿದ್ದರೂ ಅವರ ಮೇಲೆ ದುರುದ್ದೇಶದಿಂದ ಎಫ್ಐಆರ್ ಹಾಕಿರುವುದು ಯಾವ ಸೀಮೆ ನ್ಯಾಯ?
ಸುಳ್ಳು ಕೇಸುಗಳನ್ನು ಹಾಕುವ ಮೂಲಕ ಬಿಜೆಪಿ ಶಾಸಕರಿಗೆ ಬೆದರಿಕೆ ಹಾಕಬಹುದು ಎಂಬ ಭ್ರಮೆಯಿಂದ ಕಾಂಗ್ರೆಸ್ ಸರ್ಕಾರ ಹೊರಬರಬೇಕು. ಬಿಜೆಪಿ ಯಾವುದೇ ಅಪರಾಧಿಗಳನ್ನು ರಕ್ಷಿಸುವುದಿಲ್ಲ. ಆರೋಪ ಇದ್ದರೆ ಕಾನೂನಿನ ಪ್ರಕಾರ ತನಿಖೆ ಮಾಡಲಿ. ನ್ಯಾಯಾಲಯದಲ್ಲಿ ಸಾಬೀತು ಮಾಡಲಿ. ಅದು ಬಿಟ್ಟು ಈ ರೀತಿ ದ್ವೇಷ ರಾಜಕಾರಣ ಮಾಡಿ ವಿಪಕ್ಷ ಶಾಸಕರನ್ನು ಟಾರ್ಗೆಟ್ ಮಾಡಿದರೆ, ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ, ಎಚ್ಚರಿಕೆ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




