ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಅಸಮಾಧಾನದ ಬೇಗುದಿ ತೀವ್ರಗೊಂಡಿದ್ದು, ಯಾವುದೇ ಕ್ಷಣದಲ್ಲಿ ಇದು ಸ್ಫೋಟಗೊಂಡು ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ. ನಾವು ಆಪರೇಷನ್ ಕಮಲ ಮಾಡಲ್ಲ. ಆದರೆ, ಹತಾಶ ಕಾಂಗ್ರೆಸ್ ಶಾಸಕರು ತಾವಾಗಿಯೇ ಬಿಜೆಪಿ ಸೇರಲಿದ್ದಾರೆ ಎಂದರು.
ಕಾಂಗ್ರೆಸಿನ ಯಾವುದೇ ಶಾಸಕರನ್ನು ನಾವು ಸೆಳೆಯುವ ಪ್ರಯತ್ನ ಮಾಡುತ್ತಿಲ್ಲ. ಅವರೇ ಬರ್ತಾರೆ ಇದಕ್ಕೆ ಆಪರೇಷನ್ ಕಮಲ ಅಂತಾರೆ ಎಂದರು.
ಸರ್ಕಾರದ ಕಾರ್ಯವೈಖರಿಯ ಬಗ್ಗೆ ಕೇವಲ ರಾಜು ಕಾಗೆ ಮತ್ತು ಬಿ ಆರ್ ಪಾಟೀಲ್ ಮಾತ್ರವಲ್ಲ ಅನೇಕರು ಅಸಮಾಧಾನಗೊಂಡಿದ್ದಾರೆ. ಅವರೆಲ್ಲರೂ ಸದ್ಯದಲ್ಲಿಯೇ ತಮ್ಮ ಅಸಮಾಧಾನ ಬಹಿರಂಗಪಡಿಸಲಿದ್ದಾರೆ. ಕಾದುನೋಡಿ ಎಂದರು.
ರಾಜ್ಯ ಸರ್ಕಾರದ ವಿರುದ್ಧ ಮಾತನಾಡಿದ ಆರೋಪದ ಮೇಲೆ ಇನ್ಫೋಸಿಸ್ನ ಮಾಜಿ ನಿರ್ದೇಶಕ ಮೋಹನ್ ದಾಸ್ ಪೈ ಮೇಲೆ ಕೇಸ್ ಹಾಕಿಸಿ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಒಂದು ರೀತಿ ತುರ್ತು ಪರಿಸ್ಥಿತಿ ತರುವ ರೀತಿ ಮಾಡುತ್ತಿದ್ದಾರೆ. ಇದಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಬೆಂಬಲ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದರು.




