ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಗನ್ ಇಟ್ಟುಕೊಂಡು ಓಡಾಡುವ ಮೂಲಕ ತಮ್ಮದು ಗೂಂಡಾ ರಾಜ್ಯ ಎಂದು ತೋರಿಸಿಕೊಂಡಿದ್ದಾರೆ. ಇಂತಹ ಘಟನೆಯಿಂದ ಪೊಲೀಸ್ ಇಲಾಖೆ ಬದುಕಿದ್ದೂ ಸತ್ತಂತಾಗಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಒಂದು ತಿಂಗಳು ಮುಂಚಿತವಾಗಿ ಗನ್ ವಾಪಸ್ ಕೊಡಬೇಕಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಮೇಲೆ ಒತ್ತಡ ಹಾಕಿ ಗನ್ ಅನ್ನು ಜೇಬಿನಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದಾರೆ. ಇದು ಕಾಂಗ್ರೆಸ್ ಕಾರ್ಯಕರ್ತರೇ ಮಾಡುತ್ತಿರುವ ರೌಡಿಸಂ. ಅಂತಹವರು ಮುಖ್ಯಮಂತ್ರಿಗಳಿಗೆ ಹಾರ ಹಾಕುವ ಮೂಲಕ ನಾವು ಕಾನೂನು ಪಾಲನೆ ಮಾಡಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಇದೇ ಕಾಂಗ್ರೆಸ್ಸಿನ ಗೂಂಡಾ ರಾಜ್ಯ ಎಂದರು.
ಇದು ಅತಿ ದೊಡ್ಡ ಭದ್ರತಾ ವೈಫಲ್ಯವಾಗಿದೆ. ಇನ್ನು ನಾಳೆಯ ದಿನಗಳಲ್ಲಿ ಯಾರಾದರೂ ಬಾಂಬ್ ಇಟ್ಟುಕೊಂಡು ಓಡಾಡಬಹುದು. ಇಂತಹ ಘಟನೆಯಿಂದ ಪೊಲೀಸ್ ಇಲಾಖೆ ಬದುಕಿದ್ದೂ ಸತ್ತಂತಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ನಾನು ಸದನದಲ್ಲೇ ಹೇಳಿದ್ದೆ. ಇದು ಕೂಡ ಒಂದು ನಿದರ್ಶನ. ಇದಕ್ಕೆ ಸರ್ಕಾರ ಏನು ಉತ್ತರ ಕೊಡಲಿದೆ ಎಂದು ಜನರು ನಿರೀಕ್ಷಿಸುತ್ತಿದ್ದಾರೆ. ಈ ಕುರಿತು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲಿದೆ ಎಂದರು.
ಕೇರಳ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿತ್ತು. ಕರ್ನಾಟಕ ಸರ್ಕಾರ ಈಗಾಗಲೇ ಬರ ಪರಿಹಾರ ಬಿಡುಗಡೆ ಮಾಡಬೇಕಿದ್ದರೂ, ಚುನಾವಣೆಯ ಸಮಯದಲ್ಲಿ ಕೇಂದ್ರದ ಮೇಲೆ ಆರೋಪ ಮಾಡಲಾಗಿದೆ. ರಾಜ್ಯ ಸರ್ಕಾರ ಉಚಿತಗಳನ್ನು ನೀಡಿ ಹಣ ಖಾಲಿ ಮಾಡಿಕೊಂಡಿರುವುದರಿಂದ ಪರಿಹಾರ ನೀಡಲು ಹಣವಿಲ್ಲ ಎಂದರು.




