ಮೈಸೂರು: ಹ್ಯಾಟ್ರಿಕ್ ಹೀರೊ ಶಿವರಾಜ್ಕುಮಾರ್ ಅಭಿನಯದ ಸೂಪರ್ ಹಿಟ್ ಚಿತ್ರ ‘ಭಜರಂಗಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ನಟಿ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿರುವ ದುರ್ಘಟನೆ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದ ವಿದ್ಯಾ ನಂದೀಶ್, ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಕಾಣಿಸಿಕೊಂಡು ಗಮನ ಸೆಳೆದಿದ್ದರು.
ಅವರು ಸಮಾಜ ಸೇವಕ ಬನ್ನೂರು ಸಮೀಪದ ತುರಗನೂರಿನ ನಂದೀಶ್ ಅವರನ್ನು ವಿವಾಹವಾಗಿದ್ದರು. ವಿದ್ಯಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಮೈಸೂರಿನ ಶ್ರೀರಾಮಪುರದಲ್ಲಿ ಪತಿ ಹಾಗೂ ಮಕ್ಕಳ ಜೊತೆಗೆ ವಾಸವಾಗಿದ್ದರು.
ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಅವರು, ಪಕ್ಷದ ಬ್ಲಾಕ್ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ಕೆಲ ಕಾಂಗ್ರೆಸ್ ನಾಯಕರೊಂದಿಗೆ ಆಪ್ತರಾಗಿದ್ದರು. ಇದು ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎಂದು ವರದಿಯಾಗಿದೆ.
ಮೊನ್ನೆ ಬನ್ನೂರಿನ ತುರಗನೂರಿನಲ್ಲಿ ಪತಿ ಮನೆಗೆ ಆಕೆ ತೆರಳಿದ್ದಾರೆ . ಅಲ್ಲಿ ಇದೇ ವಿಷಯವಾಗಿ ಗಲಾಟೆ ನಡೆದಿದ್ದು ಅದು ವಿಕೋಪಕ್ಕೆ ಹೋಗಿದೆ. ಗಲಾಟೆ ವೇಳೆ ಪತ್ನಿ ತಲೆಗೆ ನಂದೀಶ್ ಹರಿತವಾದ ಆಯುಧದಿಂದ ಹೊಡೆದು ಓಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬನ್ನೂರು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.




