ಬೆಂಗಳೂರು: ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧ ಅಪರೂಪದ ವಿದ್ಯಮಾನವೊಂದಕ್ಕೆ ಸಾಕ್ಷಿಯಾಯಿತು. ವಿಧಾನಸೌಧ ಮತ್ತು ವಿಕಾಸಸೌಧ ಅಪವಿತ್ರಗೊಂಡಿದೆ ಎಂದು ಹೇಳಿ ಅರ್ಚಕರು ಮತ್ತು ಆಗಮಿಕರ ತಂಡ ಆಗಮಿಸಿ ಅದನ್ನು ಪವಿತ್ರಗೊಳಿಸುವ ಕಾರ್ಯಕ್ಕೆ ಮುಂದಾಯಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ಆಗಮಿಸಿದ ಆರ್ಚಕರ ತಂಡ ವಿಕಾಸಸೌಧದ ಗೇಟ್ ಬಳಿ ಪವಿತ್ರೀಕರಣದ ಪೂಜೆ ಆರಂಭಿಸಿತು. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಇದಕ್ಕೆ ತಡೆಯೊಡ್ಡಿದ್ದರು. ಆಡಳಿತದ ಶಕ್ತಿ ಕೇಂದ್ರದ ಗೇಟುಗಳ ಬಳಿ ಇಂತಹ ಆಚರಣೆಗೆ ಅವಕಾಶವಿಲ್ಲ ಎಂದು ಅಡ್ಡಿಪಡಿಸಿದರು.
ಪೊಲೀಸರ ಈ ಕ್ರಮಕ್ಕೆ ಕಾಂಗ್ರೆಸ್ ಮುಖಂಡ ಮನೋಹರ್ ಮತ್ತವರ ತಂಡ ತೀವ್ರ ಆಕ್ರೋಶ ವ್ಯಕ್ತಪಡಿಸಿತು. ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ಅವರು ವಿಧಾನಸೌಧ ಮತ್ತು ವಿಕಾಸ ಸೌಧದಲ್ಲಿ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿದ್ದಾರೆ. ಇದರಿಂದ ಆಡಳಿತ ಶಕ್ತಿ ಕೇಂದ್ರದ ಪಾವಿತ್ರಕ್ಕೆ ಧಕ್ಕೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಸಂತ್ರಸ್ತೆಯನ್ನು ಇಲ್ಲಿಗೆ ಕರೆತಂದು ಘಟನೆ ನಡೆದ ಸ್ಥಳದ ಮಹಜರು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಶುದ್ಧೀಕರಣ ಮಾಡುವ ಮೂಲಕ ಪವಿತ್ರೀಕರಣ ಮಾಡಲಾಗುತ್ತಿದೆ ಎಂದರು.
ಆಡಳಿತ ಶಕ್ತಿ ಕೇಂದ್ರವನ್ನು ಪವಿತ್ರಗೊಳಿಸುವ ಕೆಲಸಕ್ಕೆ ಅವಕಾಶ ನೀಡದೆ ಪೊಲೀಸರು ದರ್ಪ ತೋರುತ್ತಿದ್ದಾರೆ ಎಂದು ಆಪಾದಿಸಿದರು. ಈ ವೇಳೆ ಪೊಲೀಸರು ಮನೋಹರ್ ಮತ್ತು ಅವರ ಬೆಂಬಲಿಗರನ್ನು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.




