ರಾಮನಗರ: ಜನರ ಆಶೀರ್ವಾದದಿಂದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ವಿರೋಧಿಗಳ ಟೀಕೆಗೆ ಜನ ಉತ್ತರ ಕೊಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಗ್ಯಾರಂಟಿಗಳನ್ನು ನೀಡಿದೆ. ಮಹಿಳೆಯರು ಕೂಡ ಗ್ಯಾರಂಟಿಗಳ ಪ್ರಯೋಜನ ಪಡೆದುಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಅನುಕೂಲ ಆಗಿದೆ. ಗ್ಯಾರಂಟಿಗಳ ಬಗ್ಗೆ ವಿರೋಧಿಗಳು ಪದೇ ಪದೇ ಟೀಕೆ ಮಾಡುತ್ತಿದ್ದರು. ಈ ಎಲ್ಲಾ ಟೀಕೆಗಳಿಗೂ ಮತದಾರರು ಉತ್ತರ ನೀಡಿದ್ದಾರೆ ಎಂದರು.
ಬಿಜೆಪಿಯವರು ಸರ್ಕಾರದ ವಿರುದ್ಧ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದರು. ಏನೂ ಇಲ್ಲದಿದ್ದರೂ ಬಿಜೆಪಿಯವರು ಹಗರಣ ಇದೆ ಎಂದು ಆರೋಪ ಮಾಡುತ್ತಿದ್ದರು. ಉಪ ಚುನಾವಣೆಯಲ್ಲಿ ಅದಕ್ಕೆಲ್ಲಾ ಶಾಸ್ತಿಯಾಗಿದೆ ಎಂದರು.



