ಶ್ರೀ ಮಹದೇವಪ್ಪ ಪ್ರತಿಷ್ಠಾನದಿಂದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
ಬೀದಿ ಬದಿಯ ವ್ಯಾಪಾರಿಗಳಿಗೆ ಬೃಹತ್ ಛತ್ರಿ ವಿತರಣೆ
ಬೆಂಗಳೂರು: ಶಂಕರಮಠದ ಶ್ರೀ ಮಹದೇವಪ್ಪ ಪ್ರತಿಷ್ಠಾನದ ವತಿಯಿಂದ ಡಾ.ಸೋಲಂಕಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜಿಸಲಾಗಿತ್ತು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ರಾಜ್ಯಸಭಾ ಮಾಜಿ ಸದಸ್ಯ ಪ್ರೊ.ರಾಜೀವ್ ಗೌಡ, ನಟ, ನಿರ್ದೇಶಕ ಎಸ್.ನಾರಾಯಣ್, ಬಿಬಿಎಂಪಿ ಮಾಜಿ ಸದಸ್ಯ ಎಸ್.ಕೇಶವಮೂರ್ತಿ, ಎಮ್.ಶಿವರಾಜು, ನಗರ ಪಾಲಿಕೆ ಮಾಜಿ ಸದಸ್ಯೆ ಮಹದೇವಮ್ಮ, ಸೋಲಂಕಿ ಆಸ್ಪತ್ರೆ ವೈದ್ಯ ಡಾ.ಹರ್ಪತ್ ಸೋಲಂಕಿ, ಕಾಂಗ್ರೆಸ್ ಮುಖಂಡ ಜನಾರ್ಧನ್ ರವರು ದೀಪ ಬೆಳಗಿಸಿ ಶಿಬಿರಕ್ಕೆ ಚಾಲನೆ ನೀಡಿದರು.
ಪ್ರೊ.ರಾಜೀವ್ ಗೌಡ ಮಾತನಾಡಿ, ವಿಡಿಯೊ ಗೇಮ್ಸ್ ಮತ್ತು ಮೊಬೈಲ್ ಸತತವಾಗಿ ವೀಕ್ಷಣೆಯಿಂದ ಮಕ್ಕಳಿಂದ ಹಿಡಿದು ಎಲ್ಲರ ವಯಸ್ಸರಲ್ಲಿ ಕಣ್ಣಿನ ದೋಷ ಬರುತ್ತಿದೆ. ಪ್ರತಿಯೊಬ್ಬರು ಆರೋಗ್ಯವಂತರಾಗಿ ಇರಲು ದೃಹಿಕ ಚಟುವಟಿಕೆಗಳಾದ ವಾಕಿಂಗ್ ಮತ್ತು ವ್ಯಾಯಾಮ ಮಾಡಬೇಕು, ಉತ್ತಮ ಆಹಾರ ಪದ್ದತಿಯನ್ನು ಜೀವನಶೈಲಿಯಾಗಬೇಕು. ಆರೋಗ್ಯ ಕ್ಷೇತ್ರದಲ್ಲಿ ರಾಜ್ಯದ ಕಾಂಗ್ರೆಸ್ ಪಕ್ಷದ ಸರ್ಕಾರ ಬಡಜನರಿಗೆ ಉತ್ತಮ ಸೇವೆ ಕೊಡುತ್ತಿದೆ ಎಂದರು.
ನಟ, ನಿರ್ದೇಶಕ ಎಸ್.ನಾರಾಯಣ್ ಮಾತನಾಡಿ, ಜನಗಳ ನಡುವೆ, ಜನರಿಗೆ ಸೇವೆ ಮಾಡುವವರು ನಿಜವಾದ ರಾಜಕಾರಣಿ. ಉತ್ತಮ ಜನರು ರಾಜಕಾರಣಕ್ಕೆ ಬರಬೇಕು. ಮೂರು ತಿಂಗಳಿಗೆ ಒಮ್ಮೆ ಆರೋಗ್ಯ ತಪಾಸಣೆ ಮಾಡಿಸಬೇಕು. ಅದರೆ ಆರ್ಥಿಕವಾಗಿ ಹಿಂದುಳಿದವರು ತಪಾಸಣೆಗೆ ಹೋಗುವುದಿಲ್ಲ, ಉಚಿತ ಆರೋಗ್ಯ ತಪಾಸಣೆ ಶಿಬಿರದಿಂದ ಅವರಿಗೆ ಅನುಕೂಲವಾಗಲಿದೆ. ಕೆಟ್ಟ ಸಹವಾಸ, ಕೆಟ್ಟ ವ್ಯಸನಗಳಾದ ಸಿಗರೇಟ್, ಕುಡಿತದ ಚಟಗಳಿಂದ ದೂರ ಇರಿ, ಉತ್ತಮ ಆರೋಗ್ಯ ಚಟುವಟಿಕೆಗಳನ್ನು ಆಳವಡಿಸಿಕೊಳ್ಳಿ ಎಂದರು.
ಎಸ್.ಕೇಶವಮೂರ್ತಿ ಮಾತನಾಡಿ, ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಎಲ್ಲ ವಾರ್ಡ್ ಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಸತತವಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ. ಬಡಜನರ ಸೇವೆ ದೇವರ ಸೇವೆ ಮಾಡಿದಂತೆ. ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ನಾಡಿನ ಪ್ರತಿ ಕುಟುಂಬಕ್ಕೆ ತಲುಪಿಸಿ ನಾಡಿನ ಜನರ ಸೇವೆ ಮಾಡಿದೆ ಎಂದರು.
ಎಮ್.ಶಿವರಾಜು ಮಾತನಾಡಿ, ಶ್ರೀ ಮಹದೇವಪ್ಪ ಪ್ರತಿಷ್ಠಾನ ಶಿಕ್ಷಣ, ಆರೋಗ್ಯ ಮತ್ತು ಪರಿಸರದ ಕುರಿತು ಸಾಮಾಜಿಕ ಸೇವೆ ಮಾಡುತ್ತಿದೆ. 27 ಸರ್ಕಾರಿ ಮತ್ತು ಬಿಬಿಎಂಪಿ ಶಾಲೆ 50ನೋಟ್ ಪುಸ್ತಕವನ್ನು ಉಚಿತವಾಗಿ ಈ ವರ್ಷ ವಿತರಿಸಲಾಗಿದೆ. ನಮ್ಮ ಪ್ರತಿಷ್ಠಾನದ ವತಿಯಿಂದ 500ಕ್ಕೂ ಹೆಚ್ಚು ಜನರಿಗೆ ಉಚಿತವಾಗಿ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿದೆ. ಶ್ರೀ ಮಹದೇವಪ್ಪ ಪ್ರತಿಷ್ಠಾನ ಜನಸೇವೆಯೆ ಉದ್ದೇಶವಾಗಿದೆ ಎಂದರು.
ಇದೇ ವೇಳೆ ಬೀದಿಬದಿಯ ವ್ಯಾಪಾರಿಗಳಿಗೆ ಮಳೆ, ಗಾಳಿಯಿಂದ ರಕ್ಷಣೆಗಾಗಿ ಬೃಹತ್ ಛತ್ರಿಗಳನ್ನು ವಿತರಿಸಲಾಯಿತು.




