ಕಲಬುರಗಿ: ರಾಜ್ಯದ ಸಂಸದರೊಬ್ಬರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ದೇಶ ಒಪ್ಪುವ ಸಂವಿಧಾನ ತಿದ್ದುಮಾಡಿ ಮಾಡುವುದಾಗಿ ಘಂಟಾಘೋಷವಾಗಿ ಹೇಳುತ್ತಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗು ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
- ಸರ್ವಜನಾಂಗದ ಶಾಂತಿಯ ತೋಟವೇ ನಮ್ಮ ಗುರಿ: ಸಿದ್ದರಾಮಯ್ಯ
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದ ಎ.ಸಿ.ಸಿ. ಕಂಪನಿ ಗೇಟ್ ಆವರಣದಲ್ಲಿ ಆಯೋಜಿಸಿದ ಕಲಬುರಗಿ ಜಿಲ್ಲಾ ಮಟ್ಟದ ಸಂವಿಧಾನ ಜಾಗೃತಿ ಜಾಥಾದ ಸಮಾರೋಪ ಸಮಾರಂಭ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದೂ ಮಾತನಾಡಿದ ಅವರು, ಸಂವಿಧಾನ ರಕ್ಷಣೆಗೆ ಹಿಂದಿಗಿಂತ ಹೆಚ್ಚು ನಾವೆಲ್ಲರು ಇದೀಗ ಮುಂದಾಗಬೇಕಿದೆ ಎಂದು ಕರೆನೀಡಿದರು.
ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಚುನಾವಣಾ ಪೂರ್ವ ಘೋಷಣೆಯಂತೆ 5 ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ಜಾರಿಗೊಳಿಸಿದ್ದೇವೆ. ನಾಡಿನ ಯುವ ಜನರು, ಮಹಿಳೆಯರ ಏಳಿಗೆಗೆ ಬದ್ಧವಾಗಿದ್ದೇವೆ. ಇದಕ್ಕಾಗಿ ಜನರ ದುಡ್ಡನ್ನು ಜನರ ಬಾಗಿಲಿಗೆ ನೀಡುತ್ತಿದ್ದೇವೆ ಎಂದರು.




