ಕಲಬುರಗಿ: ರಾಜ್ಯದ ಸಂಸದರೊಬ್ಬರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ದೇಶ ಒಪ್ಪುವ ಸಂವಿಧಾನ ತಿದ್ದುಮಾಡಿ ಮಾಡುವುದಾಗಿ ಘಂಟಾಘೋಷವಾಗಿ ಹೇಳುತ್ತಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗು ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದ ಎ.ಸಿ.ಸಿ. ಕಂಪನಿ ಗೇಟ್ ಆವರಣದಲ್ಲಿ ಆಯೋಜಿಸಿದ ಕಲಬುರಗಿ ಜಿಲ್ಲಾ ಮಟ್ಟದ ಸಂವಿಧಾನ ಜಾಗೃತಿ ಜಾಥಾದ ಸಮಾರೋಪ ಸಮಾರಂಭ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದೂ ಮಾತನಾಡಿದ ಅವರು, ಸಂವಿಧಾನ ರಕ್ಷಣೆಗೆ ಹಿಂದಿಗಿಂತ ಹೆಚ್ಚು ನಾವೆಲ್ಲರು ಇದೀಗ ಮುಂದಾಗಬೇಕಿದೆ ಎಂದು ಕರೆನೀಡಿದರು.
ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಚುನಾವಣಾ ಪೂರ್ವ ಘೋಷಣೆಯಂತೆ 5 ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ಜಾರಿಗೊಳಿಸಿದ್ದೇವೆ. ನಾಡಿನ ಯುವ ಜನರು, ಮಹಿಳೆಯರ ಏಳಿಗೆಗೆ ಬದ್ಧವಾಗಿದ್ದೇವೆ. ಇದಕ್ಕಾಗಿ ಜನರ ದುಡ್ಡನ್ನು ಜನರ ಬಾಗಿಲಿಗೆ ನೀಡುತ್ತಿದ್ದೇವೆ ಎಂದರು.




