ಬೆಂಗಳೂರು: ಕಾಳಿ ನದಿ ಯೋಜನೆ 1ನೇ ಹಂತ ಸೂಪಾ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹದ ಕುರಿತು ಕೆಪಿಸಿಸಿಎಲ್ ವತಿಯಿಂದ ಮೂರನೆಯ ಹಾಗೂ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸೂಪಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವುದರಿಂದ ನೀರಿನ ಮಟ್ಟ ಸತತವಾಗಿ ಏರುತ್ತಿದೆ.
ಜಲಾಶಯದ ಗರಿಷ್ಠ ಮಟ್ಟ 564.00 ಮೀಟರ ಆಗಿದ್ದು, ನೀರಿನ ಸಂಗ್ರಹಣ ಸಾಮರ್ಥ್ಯ 147.55 ಟಿ.ಎಂ.ಸಿ. ಇರುತ್ತದೆ. ಜಲಾಸಯದ ಈಗಿನ ನೀರಿನ ಮಟ್ಟವು 558.87 ಮೀಟರ್ ಆಗಿದ್ದು, 126.345 ಟಿಎಂಸಿ ನೀರಿನೊಂದಿಗೆ ಒಟ್ಟು ಸಾಮರ್ಥ್ಯದ ಶೇ. 85.63ರಷ್ಟು ಭರ್ತಿಯಾಗಿದೆ.
ಇದಲ್ಲದೆ, ಜಲಾಶಯದ ಒಳಹರಿವು ಸುಮಾರು 21,261 ಕ್ಯೂಸೆಕ್ ಇದ್ದು, ನೀರಿನ ಹರಿವು ಇದೇ ರೀತಿ ಮುಂದುವರಿದರೆ ಜಲಾಶಯವು ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇರುತ್ತದೆ. ಆದ್ದರಿಂದ ಆಣೆಕಟ್ಟು ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುವುದು ಎಂದು ಕೆಪಿಸಿಎಲ್ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಆಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು. ಆಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಜಲಸಾಹಸ ಕ್ರೀಡಾ ಚಟುವಟಿಕೆಗಳನ್ನು ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸಬಾರದು ಎಂದು ಮನವಿ ಮಾಡಿದೆ.




